ಬೆಳಗಾವಿ ಅಧಿವೇಶನದಲ್ಲಿ ಉತ್ತರಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ-ಬೊಮ್ಮಾಯಿ

Public TV
1 Min Read

ಹುಬ್ಬಳ್ಳಿ: ಹವಾಮಾನ ವೈಪ್ಯರಿತ್ಯರಿಂದ ವಿಮಾನ ತಡವಾಗಿ ಲ್ಯಾಡಿಂಗ್ ಆಗಿದೆ. ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಇಂದು ಶಿಗ್ಗಾಂವನಲ್ಲಿ ಮತ ಚಲಾವಣೆ ಮಾಡುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಓಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷ ಕ್ಕೆ ಯಾವುದೇ ನಿಬಂಧನೆ ಸಧ್ಯಕ್ಕಿಲ್ಲ. ಯಾವುದೇ ತೀರ್ಮಾನವನ್ನ ಕೈಗೊಂಡಿಲ್ಲ ಎಂದರು. ಇದನ್ನೂ ಓದಿ: ಮದುವೆಗೆ ಬರುವ ಅತಿಥಿಗಳಿಗೆ ಕತ್ರಿನಾ-ವಿಕ್ಕಿ ವೆಲ್​ಕಮ್ ನೋಟ್

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನ ಮಾಡುತ್ತೇವೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಅನ್ನೋ ಆಪ್ಯ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದರು. ಇದನ್ನೂ ಓದಿ:  ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಾಲೂ ಪ್ರಸಾದ್ ಪುತ್ರ

Share This Article
Leave a Comment

Leave a Reply

Your email address will not be published. Required fields are marked *