ಇಂದು ಹೈಕಮಾಂಡ್ ನಾಯಕರ ಭೇಟಿಯಾಗಲಿರೋ ಬೊಮ್ಮಾಯಿ- ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಹುದ್ದೆ ಚರ್ಚೆ

By
1 Min Read

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ದೆಹಲಿ ತೆರಳಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನ ಮಾಡುತ್ತಿದ್ದಾರೆ.

ಸೋಮವಾರ ಇಡೀ ದಿನದ ಪ್ರಯತ್ನದ ಬಳಿಕವೂ ವರಿಷ್ಠರ ಸಮಯ ಸಿಗಲಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲಿ ಸಾಲು ಸಾಲು ಮಸೂದೆಗಳ ಮಂಡನೆ ಹಿನ್ನೆಲೆ ಹೈಕಮಾಂಡ್ ಬೊಮ್ಮಾಯಿಗೆ ಸಮಯ ನೀಡಿಲ್ಲ.

ಇಂದು ಬೊಮ್ಮಾಯಿಯವರು ಹೈಕಮಾಂಡ್ ನಾಯಕರ ಭೇಟಿ ಮಾಡುವ ಸಾಧ್ಯತೆ ಇದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಸಮಯ ಕೇಳಿದ್ದಾರೆ. ಇಂದು ವರಿಷ್ಠರಿಂದ ಸಮಯ ಸಿಗುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾಷಣದಲ್ಲಿ ಮತದಾರರಿಗೆ ಆಮಿಷ – ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ರದ್ದು

ಒಂದು ವೇಳೆ ನಾಯಕರ ಭೇಟಿ ಮಾಡಿದರೆ ವಿಪಕ್ಷ ನಾಯಕನ ಹುದ್ದೆ ಚರ್ಚೆ ಹಾಗೂ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದಿಡಲು ತಿರ್ಮಾನ ಮಾಡಿದ್ದಾರೆ. ಆದರೆ ವಿಪಕ್ಷ ನಾಯಕ ಹುದ್ದೆ ಕೇಳಲು ಬೊಮ್ಮಾಯಿ ಹಿಂದೇಟು ಹಾಕಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಸೋಲು ಕಂಡಿದೆ. ಹೀಗಾಗಿ ಈಗಾಗಲೇ ಅವರು ವರಿಷ್ಠರ ಮುಂದೆ ಸೋಲಿನ ಹೊಣೆ ಹೊತ್ತಿದ್ದಾರೆ. ಈ ಹಿನ್ನಲೆ ತಮಗೆ ಸ್ಥಾನ ಕೇಳುವ ಬದಲು, ಶೀಘ್ರ ವಿಪಕ್ಷ ನಾಯಕ ಆಯ್ಕೆಗೆ ಮನವಿ ಸಾಧ್ಯತೆ ಇದೆ.

ಒಟ್ಟಿನಲ್ಲಿ ಹೈಕಮಾಂಡ್ ಖುದ್ದು ಅವಕಾಶ ನೀಡಿದ್ದಲ್ಲಿ ಮಾತ್ರ ಅಖಾಡಕ್ಕಿಳಿಯಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್