ಸಚಿವ ಸ್ಥಾನ ಕೊಟ್ರೆ ಪ್ರಮಾಣವಚನ, ಇಲ್ಲಂದ್ರೆ ಹುಬ್ಳಿ ದಾರಿ : ಬಸವರಾಜ್ ಹೊರಟ್ಟಿ

Public TV
1 Min Read

ಬೆಂಗಳೂರು: ನನಗೆ ಸಚಿವ ಸ್ಥಾನ ಕೊಟ್ಟರೆ ಪ್ರಮಾಣವಚನ ಸ್ವೀಕರಿಸುತ್ತೇನೆ. ಇಲ್ಲವಾದರೆ ಹುಬ್ಬಳ್ಳಿ ದಾರಿ ಹಿಡಿಯುತ್ತೇನೆ ಎಂದು ಜೆಡಿಎಸ್ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಮಾತಾಡಿದ ಹೊರಟ್ಟಿ, ಉತ್ತರ ಕರ್ನಾಟಕಕ್ಕೆ ಸಂಪುಟ ವಿಸ್ತರಣೆ ವೇಳೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು ಎನ್ನುವುದು ನಮ್ಮ ನಿರೀಕ್ಷೆ. ಆದರೆ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು. ಸಚಿವ ಸ್ಥಾನ ಕೊಟ್ಟರೆ ನಿರ್ವಹಿಸುತ್ತೇನೆ. ಇಲ್ಲದಿದ್ರೆ ಹುಬ್ಬಳ್ಳಿ ದಾರಿ ಹಿಡಿಯುತ್ತೇನೆ ಎಂದು ತಿಳಿಸಿದರು.

ಅಧಿವೇಶನದಲ್ಲಿ ನಾನು ಸಭಾಪತಿಯಾಗಿ ಕೆಲಸ ಮಾಡುವ ಆಸೆಯಿತ್ತು. ಆದರೆ ದುರ್ದೈವದಿಂದ ಅದು ಆಗಲಿಲ್ಲ ಎಂದು ಈ ಸಮಯದಲ್ಲಿ ಬಸವರಾಜ ಹೊರಟ್ಟಿ ತಮ್ಮ ಅಸಮಾಧಾನವನ್ನು ಹೊರ ಹಾಕಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *