– ರಾಜಕಾರಣ ಬರೀ ಟೀಕೆ ಮಾಡೋದಾಗಿದೆ
ಕೊಪ್ಪಳ: RSS ಮುಖಂಡರು ಹೇಳುವ ಕೆಲ ವಿಚಾರಗಳು ಸರಿ ಇರತ್ತವೆ ಎಂದು (RSS) ಆರ್ಎಸ್ಎಸ್ ಮೇಲೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಾಫ್ಟ್ ಕಾರ್ನರ್ ತೋರಿ ಕೊಪ್ಪಳದಲ್ಲಿ ಹೇಳಿಕೆಯನ್ನು ನೀಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆರ್ಎಸ್ಎಸ್ ಕುರಿತು ಹೇಳಿಕೆ ವಿಚಾರವಾಗಿ ನಾನು ರಾಜಕಾರಣವನ್ನು ಮಾತಾನಾಡೋದಿಲ್ಲ. ಆರ್ಎಸ್ಎಸ್ ಮುಖಂಡರು ಹೇಳುವ ಕೆಲ ವಿಚಾರಗಳು ಸರಿ ಇರತ್ತವೆ. ಅವರ ಅವರ ವೈಯಕ್ತಿಕವಾಗಿದೆ, ನಾನು ಏನೂ ಮಾತನಾಡುವದಿಲ್ಲ ಎಂದು ಬಸವರಾಜ್ ಹೊರಟ್ಟಿ ಆರ್ಎಸ್ಎಸ್ ಮೇಲೆ ಮೃದು ಧೋರಣೆಯನ್ನು ತೋರಿದ್ದಾರೆ. ಇದನ್ನೂ ಓದಿ: RSS ಒಂದು ಕೋಮುವಾದಿ ಸಂಘಟನೆ- ಸಿದ್ದರಾಮಯ್ಯ
ಅಂದಿನ ರಾಜಕಾರಣ ತತ್ವದ ಆಧಾರದ ಮೇಲೆ ಇತ್ತು. ಇವತ್ತಿನ ರಾಜಕಾರಣ ಬರೀ ಟೀಕೆ ಮಾಡೋದಾಗಿದೆ. ಇದು ಜನರಿಗೆ ಬೇಜಾರಾಗಿದೆ. ಎಲ್ಲ ಪಕ್ಷದವರಿಗೂ ನಾನು ಹೇಳುತ್ತೆನೆ, ಬರೀ ಟೀಕೆ ಮಾಡಿ ಜನರ ಮೇಲೆ ಪರಿಣಾಮ ಬಿರೋದಿಲ್ಲ. ನಾವು ಏನ್ ಕೆಲಸ ಮಾಡುತ್ತೇವೆ ಅನ್ನೋದ ಜನರಿಗೆ ಗೊತ್ತಾಗಬೇಕು ಎಂದು ಹೊರಟ್ಟಿ ಇಂದಿನ ರಾಜಕೀಯ ಸ್ಥಿತಿ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ