ಪೌರ ಕಾರ್ಮಿಕರು ಸಂಬಳ ಕೇಳಿದ್ರೆ ಮಂಚಕ್ಕೆ ಕರಿತಾನಂತೆ ಗುತ್ತಿಗೆದಾರ

Public TV
1 Min Read

ಬೆಂಗಳೂರು: ಗುತ್ತಿಗೆದಾರನೊಬ್ಬ ಪೌರ ಕಾರ್ಮಿಕರಿಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಕೇಳಿಬಂದಿದೆ.

ಪೌರ ಕಾರ್ಮಿಕರಿಗೆ ಸರಿಯಾಗಿ ಸಂಬಳ ನೀಡದೇ ಅವಾಚ್ಯಶಬ್ದಗಳಿಂದ ನಿಂದಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುತ್ತಿದ್ದ ಗುತ್ತಿಗೆದಾರನ ವಿರುದ್ಧ ಬೆಂಗಳೂರಿನ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆ.ಆರ್.ಪುರದ ದೇವಸಂದ್ರ ಹಾಗೂ ಬಸವನಪುರ ವಾರ್ಡ್ ಕಸ ವಿಲೇವಾರಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ನಾಗೇಶ್, ಪೌರ ಕಾರ್ಮಿಕರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಪೌರಕಾರ್ಮಿಕರು ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರತಿ ತಿಂಗಳು ಪೌರ ಕಾರ್ಮಿಕರು ಸಂಬಳಕ್ಕೆ ಹೋದಾಗ ನಾಗೇಶ್ ಅವರ ಮೈ ಕೈ ಮುಟ್ಟುತ್ತಿದ್ದ, ಮಂಚಕ್ಕೆ ಕರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ನಾಗೇಶ್‍ನನ್ನು ಇನ್ನೂ ಪೊಲೀಸರು ಬಂಧಿಸಿಲ್ಲ.

ಸ್ಥಳೀಯ ಶಾಸಕರಿಗೂ ಈ ಬಗ್ಗೆ ಮಾಹಿತಿ ನೀಡಿದ್ದು ಯಾವುದೇ ಕ್ರಮ ಕೈಗೊಳ್ಳದ ಕಾರಣ ಪೌರ ಕಾರ್ಮಿಕರು ಒಟ್ಟಿಗೆ ಹೋಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೇಯರ್ ಸಂಪತ್ ರಾಜ್, ಕೂಡಲೇ ಸಂಬಂಧಪಟ್ಟ ಜಂಟಿ ಆಯುಕ್ತರ ಜೊತೆ ಮಾತನಾಡುತ್ತೇವೆ. ಬಿಬಿಎಂಪಿ ವತಿಯಿಂದಲೂ ದೂರು ದಾಖಲಿಸಿ ಪರಿಶೀಲಿಸಲು ಹೇಳುತ್ತೇವೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *