ಡಿಬಾರ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Public TV
1 Min Read

ಬೆಂಗಳೂರು: ಡಿಬಾರ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಭವ್ಯ(21) ಎಂದು ಗುರುತಿಸಲಾಗಿದೆ. ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ಭವ್ಯ ಮೊದಲ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಆದರೆ ನಿನ್ನೆ ನಡೆದ ಎಕ್ಸಾಂನಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಆರೋಪಿಸಿ ಡಿಬಾರ್ ಮಾಡಿದ್ದರು.  ಈ ವಿಚಾರವನ್ನು ಭವ್ಯ ಸೋದರಿ ದಿವ್ಯಾಗೆ ಕರೆ ಮಾಡಿ ನನ್ನನ್ನು ಡಿಬಾರ್ ಮಾಡಿದ್ದಾರೆ ಹಾಗಾಗಿ ನಾನು ಬದುಕುವುದಿಲ್ಲ ಎಂದು ನೋವು ಹಂಚಿಕೊಂಡಿದ್ದರು. ಇದನ್ನೂ ಓದಿ: ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು

ಇದರಿಂದಾಗಿ ಗಾಬರಿಗೊಂಡ ದಿವ್ಯಾ ಕೂಡಲೇ ಭವ್ಯ ಅವರ ತಂದೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಅಷ್ಟೊತ್ತಿಗೆ ಭವ್ಯ ಮೃತಪಟ್ಟಿದ್ದಾರೆ. ಇದೀಗ ಈ ಸಂಬಂಧ ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಜಿಮ್ ಟ್ರೇನರ್ ಅಂಜನ್ ಈಗ ಹೀರೋ: ‘ಅಂಜನ್’ ಟ್ರೈಲರ್ ಬಿಡುಗಡೆ ಮಾಡಿದ ಶಾಸಕ ರವಿ ಸುಬ್ರಮಣ್ಯಂ

Share This Article
Leave a Comment

Leave a Reply

Your email address will not be published. Required fields are marked *