ಬೀರಲಿಂಗೇಶ್ವರ ಕಾರ್ತಿಕೋತ್ಸವದಲ್ಲೊಂದು ಪವಾಡ

Public TV
1 Min Read

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿ ಗ್ರಾಮದಲ್ಲಿ ಬೀರಲಿಂಗೇಶ್ವರ ಕಾರ್ತಿಕೋತ್ಸದ ಹಿನ್ನೆಲೆಯಲ್ಲಿ ಲೋಳೆಸರಕ್ಕೆ ಎರಡು ಕುಡುಗೋಲು ಹಾಕಿ ಅದಕ್ಕೆ 50 ಕೆಜಿ ತೂಕದ ಕಲ್ಲು ಕಟ್ಟಿ ತೂಗಿಬಿಡಲಾಗುತ್ತದೆ.

ಗ್ರಾಮದಲ್ಲಿ ಪ್ರತಿ ಕಾರ್ತಿಕಾ ಮಾಸದಲ್ಲಿ ಹುಣ್ಣಿಮೆಗಿಂತ ಮೊದಲು ಈ ಕಾರ್ತಿಕೋತ್ಸವ ನಡೆಯುತ್ತದೆ. ಈ ಕಾರ್ತಿಕೋತ್ಸವದಲ್ಲಿ ಪವಾಡವೇ ಪ್ರಮುಖವಾದ ಕಾರ್ಯಕ್ರಮ. ಬೀರಲಿಂಗೇಶ್ವರ ದೇವಾಲಯದಲ್ಲಿ ಒಂದು ಲೋಳೆಸರ (ಅಲೋವೆರಾ)ಕ್ಕೆ ಎರಡು ಕುಡುಗೋಲನ್ನು ಹಾಕಿ, ಅದಕ್ಕೆ 50 ಕೆ.ಜಿ ತೂಕದ ಕಲ್ಲಿನ ಗುಂಡನ್ನು ತೂಗುಬಿಡುತ್ತಾರೆ. ಸಾಮಾನ್ಯವಾದ ಲೋಳೆಸರಕ್ಕೆ 50 ಕೆಜಿ ತೂಕದ ಕಲ್ಲಿನ ಗುಂಡನ್ನು ತೂಗಿ ಹಾಕಿದ್ದರೂ ತಡೆದುಕೊಳ್ಳುವ ಶಕ್ತಿ ಇದೆ ಎನ್ನುವುದೇ ಇಲ್ಲಿನ ಪವಾಡವಾಗಿದೆ.

ಕಾರ್ತಿಕ ಮಾಸದಲ್ಲಿ ಬೀರಲಿಂಗೇಶ್ವರ ದೇವಾಲಯದ ಆರ್ಚಕರು ಉಪವಾಸವಿದ್ದು ಈ ಪವಾಡ ನಡೆಸುತ್ತಾರೆ. ಈ ಪವಾಡವನ್ನು ನೋಡಿ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿಗಳು ಕೂಡ ಅಚ್ಚರಿಗೊಂಡಿದ್ದಾರೆ. ಬೆಳ್ಳೂಡಿ ಗ್ರಾಮ ಬೀರಲಿಂಗೇಶ್ವರ ದೇವಸ್ಥಾನದ ಪೂಜಾರಿಗಳಿಂದ ಪವಾಡ ನಡೆಯುತ್ತಿದ್ದು, ಪ್ರತಿ ವರ್ಷ ಪವಾಡವನ್ನು ನೋಡಲು ದೂರದೂರಿನಿಂದ ಜನರು ಆಗಮಿಸಿ ಅಪರೂಪದ ಸನ್ನಿವೇಶವನ್ನು ನೋಡಿ ಆಶ್ಚರ್ಯ ಪಡುತ್ತಾರೆ.

ಪ್ರತಿ ವರ್ಷವೂ ಇದೇ ರೀತಿಯಾದಂತಹ ಪವಾಡ ನಡೆಯುತ್ತಿದ್ದು, ಸಂಜೆ ವೇಳೆ ತುಂಬಿದ ಕೊಡಕ್ಕೆ ಪೂಜಿಸಿದ ಬಟ್ಟೆ ಕಟ್ಟಿ ಅದನ್ನು ಉಲ್ಟಾ ಮಾಡಿ ನೇತು ಹಾಕುತ್ತಾರೆ. ತುಂಬಿದ ಕೊಡದಿಂದ ಒಂದು ಹನಿ ನೀರು ಸಹ ಹೊರ ಬರುವುದಿಲ್ಲ. ಇದೆಲ್ಲ ಬೀರಲಿಂಗೇಶ್ವರ ದೇವರ ಪವಾಡ ಎಂದು ಅರ್ಚಕರು ಹೇಳುತ್ತಾರೆ

Share This Article
Leave a Comment

Leave a Reply

Your email address will not be published. Required fields are marked *