ಬೆಳಕು ಇಂಪ್ಯಾಕ್ಟ್: 16 ವರ್ಷಗಳಿಂದ ಹಾಲು ಕುಡಿಯುವ ಬಾಲಕನಿಗೆ ಸಿಕ್ತು ನೆರವು

Public TV
2 Min Read

ಕೋಲಾರ: ಆತ ಅನ್ನ ತಿನ್ನಲ್ಲ ನೀರು ಕುಡಿಯಲ್ಲ, ಕಳೆದ 16 ವರ್ಷಗಳಿಂದ ಅನ್ನ ನೀರು ಇಲ್ಲದೆ ಬದುಕುತ್ತಿರುವ ಬಾಲಕನಿಗೆ ಕೇವಲ ಹಾಲಷ್ಟೇ ಆಹಾರ. ಬರಿ ಹಾಲು ಕುಡಿದೆ ಜೀವನ ಸವೆಸುತ್ತಿರುವ ಬಾಲಕನಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ಆಸರೆಯಾಗಿದೆ. ಬೆಳಕಿನ ನೆರವಿನಿಂದ ಬಾಲಕನಿಗೆ ಹಾಲು, ಆತನನ್ನ ಪೋಷಣೆ ಮಾಡಲು ಕುಟುಂಬಕ್ಕೆ ನೆರವು ಸಿಕ್ಕಿದೆ.

ಕೋಲಾರ ತಾಲೂಕಿನ ಕೋಡಿ ಕಣ್ಣೂರು ಗ್ರಾಮದ ಗೋವಿಂದಪ್ಪ ದಂಪತಿಗಳ ಎರಡನೆ ಮಗ ಸಂತೋಷ್ ಕೇವಲ ಹಾಲು ಮಾತ್ರ ಕುಡಿಯುತ್ತಾನೆ. ಸಂತೋಷ್ ಹುಟ್ಟಿದಾಗಿನಿಂದಲೂ ಅನ್ನವನ್ನು ಸೇವಿಸಲ್ಲ. ಇದುವರೆಗೂ ಬದುಕಿರೋದು ಕೇವಲ ಹಾಲನ್ನ ಕುಡಿದು ಅನ್ನೋದೆ ವಿಶೇಷ. ಬೇರೆ ಲಿಕ್ವಡ್ ಕುಡಿಸುವ ಪೋಷಕರು ಪಟ್ಟಿರುವ ಪ್ರಯತ್ನ ಅಷ್ಟಿಷ್ಟಲ್ಲ, ಈತನ ಬಾಯಿಗೆ ತಿಂಡಿ ಅಥವಾ ಇನ್ನೇನಾದ್ರು ತಿನ್ನಿಸೋದಿಕ್ಕೆ ಬಂದ್ರು ಉಗಿದುಬಿಡ್ತಾನೆ. ಹಾಲು ತುಂಬಿದ ಬಾಟಲ್ ಮಾತ್ರ ಈತನಿಗೆ ಗೊತ್ತಿರೋದು.

ಹೀಗಿರುವಾಗ ಸಂತೋಷ್ ಪೋಷಕರು ಪಬ್ಲಿಕ್ ಟಿವಿಯನ್ನ ಸಂಪರ್ಕಿಸಿ ಪ್ರತಿ ನಿತ್ಯ ಹಾಲು ಕೊಡಿಸುವಂತೆ ಮನವಿ ಮಾಡಿದ್ರು. ಪಬ್ಲಿಕ್ ಟಿವಿ ಮನವಿಯಂತೆ ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಪ್ರತಿನಿತ್ಯ ಹಾಲು ನೀಡುತ್ತಿದೆ. ಜೊತೆಗೆ ಕುಟುಂಬ ಪೋಷಣೆಗೆ ಒಂದು ಉದ್ಯೋಗಕ್ಕೆ ಕೂಡ ಬೆಳಕು ಆಸರೆಯಾಗಿದೆ.

ಬೆಳಕಿನ ಆಸರೆ: ಸಂತೋಷ್ 6 ತಿಂಗಳ ಮಗುವಿನಲ್ಲಿ ಪಿಡ್ಸ್ ಬಂದು ಶಾಕ್ ಆದ ಕಾರಣ ಒಂದು ಕೈ, ಮೆದಳು ಸ್ವಾಧೀನ ಕಳೆದುಕೊಂಡಿದೆ. ಬೆಂಗಳೂರಿನ ವಿಕ್ಟೋರಿಯಾ, ನಿಮ್ಹಾನ್ಸ್ ಆಸ್ಪತ್ರೆಗಳು ಸೇರಿದಂತೆ ಹಲವೆಡೆ ತೋರಿಸಲಾಗಿದೆ. ಆದ್ರೂ ಯಾವುದೆ ಪ್ರಯೋಜನವಾಗಿಲ್ಲ, ಮೆದುಲಿಗೆ ಶಾಕ್ ಆಗಿರೋ ಕಾರಣ ಜೀವನ ಪರ್ಯಂತ ಇದು ಸರಿಹೋಗಲ್ಲ ಎಂದು ವೈದ್ಯರು ಹೇಳಿ ಕಳುಹಿಸಿದ್ದಾರೆ. ಕೂಲಿ ಮಾಡಿ ಜೀವನ ಸಾಗಿಸುವುದು ಕಷ್ಟಕರವಾದ ಜೀವನದಲ್ಲಿ ಮಗನಿಗೆ ದಿನಕ್ಕೆ ಅಲ್ಪಸ್ವಲ್ಪ ಹಾಲಿನ ಜೊತೆಗೆ, ಕೋಲಾರ ನೂತನ ವಿಧಾನ ಸೌಧ ಬಳಿ ಜೆರಾಕ್ಸ್ ಅಂಗಡಿ ಹಾಕಿ ಕೊಳ್ಳಲು ಅನುಮತಿ ಸಿಕ್ಕಿದೆ. ಅದರಂತೆ ಈಗ ಹಾಲು ಹಾಗೂ ಉದ್ಯೋಗ ಕಲ್ಪಿಸುವ ಮೂಲಕ ಬಡ ಕುಟುಂಬಕ್ಕೆ ಬೆಳಕಿನ ಆಸರೆ ಸಿಕ್ಕಿದೆ.

ಒಟ್ನಲ್ಲಿ ಬೆಳಕು ಕಾರ್ಯಕ್ರಮದ ಮೂಲಕ ಸಂತೋಷನಿಗೆ ಹಾಲು ಕೊಡಿಸಿದ ಸಂತೋಷ, ಇತ್ತ ಕುಟುಂಬ ಪೋಷಣೆಗೆ ಒಂದು ಸಣ್ಣ ಅಂಗಡಿಗೂ ಅನುಮತಿ ನೀಡಿದ ಕಾಳಜಿ, ಇದರಿಂದ ಒಂದು ಬಡ ಕುಟುಂಬಕ್ಕೆ ಬೆಳಕು ಆಸರೆಯಾಯಿತಲ್ಲ ಎಂಬುದೇ ನೆಮ್ಮದಿಯ ವಿಚಾರ.

 

Share This Article
Leave a Comment

Leave a Reply

Your email address will not be published. Required fields are marked *