ಮೋದಿ ಬಳಿ ಪರಿಹಾರ ಕೇಳಲು ನಿಮ್ಗೆ ಧೈರ್ಯವಿಲ್ಲ – ಸಂಸದರಿಗೆ ಸಂತ್ರಸ್ತರು ಘೇರಾವ್

Public TV
1 Min Read

ಬೆಳಗಾವಿ: ನಿಮಗೆ ಪ್ರಧಾನಿ ನರೇಂದ್ರ ಮೋದಿ ಬಳಿ ಪರಿಹಾರ ಕೇಳಲು ಧೈರ್ಯವಿಲ್ಲ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆಗೆ ಸಂತ್ರಸ್ತರು ಗ್ರಾಮದಿಂದ ಘೇರಾವ್ ಹಾಕಿದ್ದಾರೆ.

ಗಾಂಧೀಜಿ 150ನೇ ಜನ್ಮದಿನಾಚರಣೆ ಅಂಗವಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಅಣ್ಣಾಸಾಬ್ ಜೊಲ್ಲೆ ಪಾದಯಾತ್ರೆ ಮಾಡುತ್ತಿದ್ದಾರೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಿಂದ ಪಾದಯಾತ್ರೆ ಆರಂಭ ಮಾಡಿದ ಸಂಸದರನ್ನು ತಡೆದ ಗಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರವಾಹ ಬಂದು ಎರಡು ತಿಂಗಳಾದರೂ ಯಾರೂ ನಮ್ಮ ಕಷ್ಟ ಕೇಳಲು ಬಂದಿಲ್ಲ. ನಿಮ್ಮ ಸರ್ಕಾರದಿಂದ ಪರಿಹಾರ ಬಂದಿಲ್ಲ ಸ್ಥಳೀಯ ಶಾಸಕ ಸತೀಶ್ ಜಾರಕಿಹೊಳಿ ಎಲ್ಲ ಮಾಡಿದ್ದಾರೆ. ನೀವೇನು ಮಾಡಿದ್ದೀರಿ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಕೋಪಗೊಂಡ ಸಂಸದರು, ಎಲ್ಲವನ್ನೂ ನಾವು ಮಾಡುತ್ತಿದ್ದೇವೆ ಎಂದು ಸಂತ್ರಸ್ತರನ್ನು ತಳ್ಳಿ ಮುಂದೆ ಹೋಗಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಬಳಿ ಪರಿಹಾರ ಕೊಡಿಸಲು ನಿಮಗೆ ಧೈರ್ಯವಿಲ್ಲ. ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಸಂತ್ರಸ್ತರು ಘೇರಾವ್ ಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *