ನಾವು ನಿಮ್ಮ ಸಿನಿಮಾ ನೋಡ್ತೀವಿ, ನಮ್ಮ ಸಮಸ್ಯೆಗೂ ಸ್ಪಂದಿಸಿ – ಬೆಳಗಾವಿ ಜನತೆ

Public TV
1 Min Read

ಬೆಳಗಾವಿ: ನಾವು ನಿಮ್ಮ ಸಿನಿಮಾ ನೋಡ್ತೀವಿ ನಮ್ಮ ಸಮಸ್ಯೆಗೂ ಸ್ಪಂದಿಸಿ ಎಂದು ಬೆಳಗಾವಿಯ ಪ್ರವಾಹ ಪೀಡಿತ ಜನರು ಕನ್ನಡ ಸಿನಿಮಾ ಕಲಾವಿದರಲ್ಲಿ ಮನವಿ ಮಾಡಿದ್ದಾರೆ.

ಚಿತ್ರರಂಗದವರು ದಕ್ಷಿಣ ಕರ್ನಾಟಕದಲ್ಲಿ ಸಮಸ್ಯೆ ಆದಾಗ ಎಲ್ಲರೂ ನೆರವಾಗುತ್ತಾರೆ. ಕಾವೇರಿ ನೀರು ಸಂಬಂಧ ಎಲರೂ ಹೋರಾಡುತ್ತಾರೆ. ಆದರೆ ಉತ್ತರ ಕರ್ನಾಟಕದಲ್ಲಿ ಏನೇ ಸಮಸ್ಯೆ ಆದರೂ ಬರುವುದಿಲ್ಲ. ನಮ್ಮ ನದಿ ನೀರು ಸಂಬಂಧ ಯಾರು ಹೋರಾಟ ಮಾಡುವುದಿಲ್ಲ ಎಂದು ಹುಕ್ಕೇರಿ ತಾಲೂಕಿನ ಚಿಕಲಗುಡ ಗ್ರಾಮಸ್ಥರು ಕೂಡಲೇ ಬಂದು ಸಮಸ್ಯೆಗೆ ಸ್ಪಂದಿಸುವಂತೆ ಸಿನಿಮಾ ಮಂದಿಗೆ ಆಹ್ವಾನ ನೀಡಿದ್ದಾರೆ.

ನಮ್ಮ ಉತ್ತರ ಕರ್ನಾಟಕದಲ್ಲಿ ಸುದೀಪ್, ದರ್ಶನ್, ಯಶ್ ಮತ್ತು ಧ್ರುವ ಸರ್ಜಾಗೆ ಬಹಳ ಮಂದಿ ಅಭಿಮಾನಿಗಳಿದ್ದಾರೆ. ನಾವು ಅವರ ಎಲ್ಲಾ ಸಿನಿಮಾಗಳನ್ನು ನೋಡುತ್ತೇವೆ. ನಮಗೆ ಈ ರೀತಿಯ ಪರಿಸ್ಥಿತಿ ಬಂದಾಗ ಅವರು ಈ ಕಡೆ ಬರಬೇಕು ನಮ್ಮ ರಕ್ಷಣೆಗೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ. ರಾಕಿಂಗ್ ಸ್ಟಾರ್ ಅವರ ಯಶೋಮಾರ್ಗದ ಕೇವಲ ಕೊಪ್ಪಳ ಮಾತ್ರ ಸೀಮಿತ ಅಲ್ಲ. ಉತ್ತರ ಕರ್ನಾಟಕದ ಕಡೆಗೂ ಬನ್ನಿ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ಥಳೀಯ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಗ್ರಾಮಸ್ಥರು, ರೆಸಾರ್ಟ್ ರಾಜಕೀಯ ಮಾಡುತ್ತಾ ನಮ್ಮ ಕಡೆ ಗಮನಹರಿಸಿಲ್ಲ. ನಾವು ನಿಮಗೆ ವೋಟ್ ಹಾಕಿದ್ದೇವೆ ನಮ್ಮ ಕಡೆ ಸ್ವಲ್ಪ ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *