ಬೆಳಗಾವಿ: ಹೊಲದಲ್ಲಿದ್ದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದ್ವಿಚಕ್ರ ವಾಹನ, ರಿಕ್ಷಾ ಸೇರಿದಂತೆ ಅಪಾರ ಪ್ರಮಾಣ ಹಾನಿಯಾದ ಘಟನೆ ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.
ಗಜಪತಿ ಗ್ರಾಮದ ಮಾರುತಿ ಕರಡಿ ತಮ್ಮ ಜಮೀನಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದರು. ಆದರೆ ಸೋಮವಾರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಗೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕೆನ್ನಾಲಿಗೆ ಹೆಚ್ಚಾಗಿತ್ತು. ಇದರಿಂದಾಗಿ ಗುಡಿಸಿನಲ್ಲಿದ್ದ ದಿನನಿತ್ಯ ಉಪಯೋಗಿಸುವ ಬಟ್ಟೆ, ದವಸ ಧಾನ್ಯ, ಹಾಗೂ ಬಂಗಾರ, ನಗದು, ದ್ವಿಚಕ್ರ ವಾಹನ, ಒಂದು ರಿಕ್ಷಾ ಸೇರಿದಂತೆ ಅಪಾರ ವಸ್ತುಗಳು ಬೆಂಕಿಗೆ ಅಹುತಿಯಾಗಿವೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಗುಡಿಸಲು ಹಾಗೂ ಗುಡಿಸಲಿನಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದವು. ಈ ಸಂಬಂಧ ಹಿರೆಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.