ಚುನಾವಣಾ ಅಬ್ಬರದ ನಡುವೆಯೂ ಅಪಘಾತಕ್ಕೀಡಾದವರನ್ನು ಉಪಚರಿಸಿದ ಶಶಿಕಲಾ ಜೊಲ್ಲೆ

Public TV
1 Min Read

ಚಿಕ್ಕೋಡಿ: ಚುನಾವಣೆಯ ಪ್ರಚಾರದ ಅಬ್ಬರದ ನಡುವೆಯೂ ರಸ್ತೆ ಅಪಘಾತಕ್ಕೀಡಾಗಿ ಗಾಯಗೊಂಡವರನ್ನು ಉಪಚರಿಸುವ ಮೂಲಕ ಸಚಿವೆ ಶಶಿಕಲಾ ಜೊಲ್ಲೆ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿ ಮೇಲೆ ಲಾರಿ ಹಾಗೂ ಕಾರು ಅಪಘಾತಕ್ಕೀಡಾಗಿತ್ತು. ಈ ಮಾರ್ಗದಲ್ಲಿ ಸಾಗುತ್ತಿದ್ದ ಸಚಿವೆ ಶಶಿಕಲಾ ಜೊಲ್ಲೆ ತಕ್ಷಣ ತಮ್ಮ ವಾಹನ ನಿಲ್ಲಿಸಿ ಕಾರಿನಲ್ಲಿದ್ದ ಗಾಯಗೊಂಡ ಪ್ರಯಾಣಿಕರಿಗೆ ನೀರು ನೀಡಿ ಉಪಚರಿಸಿದ್ದಾರೆ.

ಅಂಬುಲೆನ್ಸ್ ಬರುವವರೆಗೂ ಸ್ಥಳದಲ್ಲಿಯೇ ಇದ್ದು, ಗಾಯಾಳುಗಳನ್ನು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ರವಾನಿಸಿ ನಂತರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಶಶಿಕಲಾ ಜೊಲ್ಲೆ ಅವರ ಈ ಕಾರ್ಯ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *