ಅನಾರೋಗ್ಯದಿಂದ ಚಿಕ್ಕೋಡಿಯ ಯೋಧ ನಿಧನ-ನಾಳೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

Public TV
0 Min Read

ಚಿಕ್ಕೋಡಿ: ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಹುಕ್ಕೇರಿ ತಾಲೂಕಿನ ಶಿರಢಾಣ ಗ್ರಾಮದ ಯೋಧರೊಬ್ಬರು ಅಸ್ಸಾಂನಲ್ಲಿ ಮೃತಪಟ್ಟಿದ್ದಾರೆ.

ಸುನೀಲ್ ಕುಮಾರ್ ಶೆಟ್ಟಿಮನಿ (34) ಮೃತಪಟ್ಟ ಯೋಧ. ಅಸ್ಸಾಂನಲ್ಲಿ ಬಾರ್ಡರ್ ರೋಡ್ ಟಾಸ್ಕ್ ಫೋರ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸುನೀಲ್ ಕುಮಾರ್ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಯೋಧ ಸಾವನ್ನಪ್ಪಿದ್ದಾರೆ.

ಕಳೆದ 15 ವರ್ಷದಿಂದ ಬಾರ್ಡರ್ ರೋಡ್ ಟಾಸ್ಕ್ ಫೋರ್ಸ್ ನಲ್ಲಿ ಯೋಧ ಸುನೀಲ್ ಕುಮಾರ್ ಸೇವೆ ಸಲ್ಲಿಸುತ್ತಿದ್ದರು. ಅರುಣಾಚಲ ಪ್ರದೇಶದಿಂದ ಸ್ವ ಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ತರಲಾಗುತ್ತಿದ್ದು, ಮಂಗಳವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.

Share This Article
Leave a Comment

Leave a Reply

Your email address will not be published. Required fields are marked *