ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

Public TV
1 Min Read

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಾಲಕನೊಬ್ಬ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾನೆ.

ಕೂಡ್ಲಿಗಿ ಪಟ್ಟಣದ ನಿವಾಸಿ ಗಡ್ಡಿ ವೀರೇಶ್ ಅವರ 8 ವರ್ಷದ ಮಗ ಕಿಶೋರ್ ಡೆಂಗ್ಯೂ ಜ್ವರಕ್ಕೆ ಬಲಿಯಾದ ಬಾಲಕ. ಕಳೆದ ಒಂದು ತಿಂಗಳಿಂದ ವಿಪರೀತ ಜ್ವರದಿಂದ ಕಿಶೋರ್ ಬಳಲುತ್ತಿದ್ದನು. ಹೀಗಾಗಿ ಬಾಲಕನನ್ನು ಆತನ ಪಾಲಕರು ಸ್ಥಳೀಯ ಹಾಗೂ ಹೊಸಪೇಟೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದು ಚಿಕಿತ್ಸೆ ಫಲ ನೀಡಲಿಲ್ಲ.

ಹೀಗಾಗಿ ವೈದ್ಯರ ಸಲಹೆ ಮೇರೆಗೆ ಒಂದು ವಾರದ ಹಿಂದೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ. ವಿಪರೀತ ಜ್ವರ ಹಾಗೂ ಅತಿಸಾರ ಬೇಧಿಯಿಂದ ಬಳಲುತ್ತಿದ್ದ ಬಾಲಕನನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಇಂದು ಮುಂಜಾನೆ ಮೃತಪಟ್ಟಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *