ಕಾರ್, ಟಂಟಂ ಮುಖಾಮಖಿ ಡಿಕ್ಕಿ-ಶಾಸಕ ಭೀಮಾನಾಯ್ಕ್ ಪುತ್ರನಿಗೆ ಗಂಭೀರ ಗಾಯ

Public TV
1 Min Read

ಬಳ್ಳಾರಿ: ಕಾರ್ ಮತ್ತು ಟಂಟಂ ವಾಹನದ ಮಧ್ಯೆ ಭೀಕರ ಅಪಘಾತವಾಗಿ, ಕಾರಿನಲ್ಲಿದ್ದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಪುತ್ರ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಅಶೋಕ್ ಸೇರಿದಂತೆ ಇಬ್ಬರು ಚಾಲಕರಿಗೂ ಗಂಭೀರ ಗಾಯಗೊಂಡಿದ್ದಾರೆ. ಶಾಸಕರ ಪುತ್ರ ಅಶೋಕ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಹೊಸಪೇಟೆಯ ಮರಿಯಮ್ಮನಹಳ್ಳಿಯ ಬಳಿಯ ಸ್ಮಯೋರ್ ಫ್ಯಾಕ್ಟರಿ ಬಳಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಏರ್‍ ಬಲೂನ್ ಓಪನ್ ಆದ ಕಾರಣ ಶಾಸಕರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದರಿಂದ ಒಂದೇ ಕಡೆ ಎಲ್ಲ ವಾಹನಗಳು ಸಂಚರಿಸುತ್ತಿದ್ದವು. ಈ ವೇಳೆ ಕಾರು ಮತ್ತು ಟಂಟಂ ವಾಹನ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಸದ್ಯ ಹೊಸಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಶಾಸಕರ ಪುತ್ರನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *