ದೇವೇಗೌಡರ ಆಶೀರ್ವಾದದಿಂದ ಸರ್ಕಾರ 4 ವರ್ಷ ಇರುತ್ತೆ: ಸತೀಶ್ ಜಾರಕಿಹೊಳಿ

Public TV
1 Min Read

ಬಳ್ಳಾರಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದದರಿಂದ ಸಮ್ಮಿಶ್ರ ಸರ್ಕಾರ ಇರುತ್ತದೆ. ದೇವೇಗೌಡರು ಪ್ರತಿಯೊಂದು ವಿಷಯವನ್ನು ಅರ್ಥಗರ್ಭಿತವಾಗಿ, ತಳಮಟ್ಟದಲ್ಲಿಯಿಂದಲೂ ಮಾಹಿತಿ ಪಡೆದು, ಪ್ರತಿಯೊಂದನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾತನಾಡುತ್ತಾರೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಲುನ ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ಹುಲಿ ಮತ್ತು ಸಿಂಹಗಳ ಸಫಾರಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ನೆರೆವೇರಿದೆ. ಸದ್ಯಕ್ಕೆ ನಾಲ್ಕು ಹುಲಿ ಮತ್ತು ಸಿಂಹಗಳನ್ನು ತಂದು ಸಫಾರಿಯಲ್ಲಿ ಬಿಡಲಾಗಿದೆ. ಪ್ರತಿ ಜಿಲ್ಲೆಯಲ್ಲಿಯೂ ಜಿಯೋಲಾಜಿಕಲ್ ಪಾರ್ಕ್ ನಿರ್ಮಾಣ ಮಾಡಲು ಚಿಂತಿಸಲಾಗಿದೆ. ಈ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಶೀಘ್ರದಲ್ಲಿಯೇ ಬಳ್ಳಾರಿಯ ಕಿರು ಮೃಗಾಲಯವನ್ನು ಕಮಲಾಪುರಕ್ಕೆ ಶಿಫ್ಟ್ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಿಂದಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿದೆ. ಉಪಸಮಿತಿ ನೀಡುವ ವರದಿಯನ್ನಾಧರಿಸಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಇನ್ನು ಅನಿಲ್ ಲಾಡ್ ಮತ್ತು ಆನಂದ್ ಸಿಂಗ್ ಜಿಂದಾಲ್ ಕುರಿತ ಹೇಳಿಕೆಗಳು ವೈಯಕ್ತಿಕ. ಅವರಿಬ್ಬರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಹೇಳಿದರು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *