ಕಟೀಲ್‍ಗೆ ಸೀರೆ ಉಡಿಸಿದ್ರೆ ಆತ ಹೆಂಗಸು ಅಲ್ಲ, ಗಂಡಸು ಅಲ್ಲ: ಬೇಳೂರು ಗೋಪಾಲಕೃಷ್ಣ

Public TV
1 Min Read

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಸೀರೆ ಉಡಿಸಿದರೆ ಆತ ಹೆಂಗಸು ಅಲ್ಲ, ಗಂಡಸು ಅಲ್ಲ. ಅಂತಹ ವ್ಯಕ್ತಿ ನಮ್ಮ ರಾಷ್ಟ್ರೀಯ ನಾಯಕರ ಬಗ್ಗೆ ಮಾತನಾಡುತ್ತಾರೆ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದರು.

nalin kumar kateel

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಟೀಲ್ ಈ ಹಿಂದೆ ಈಡಿ ಮಂಗಳೂರಿಗೆ ಬೆಂಕಿ ಹಚ್ಚುತ್ತೇನೆ ಎಂದಿದ್ದ. ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ್ದ. ಇನ್ನು ಅವರದ್ದೇ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ನೀಲಿಚಿತ್ರ ನೋಡಿದ್ದರು. ಅವರ ಪಕ್ಷದಲ್ಲಿ ಅತ್ಯಾಚಾರಿಗಳು ಇದ್ದಾರೆ. ಹಲವು ಹಗರಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಬಗ್ಗೆ ಮಾತನಾಡಲು ಕಟೀಲ್‍ಗೆ ಯಾವುದೇ ನೈತಿಕತೆ ಇಲ್ಲ ಕಿಡಿಕಾರಿದರು. ಇದನ್ನೂ ಓದಿ: ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

ಇನ್ನೂ ಸಚಿವ ಈಶ್ವರಪ್ಪ ಅವರು ಹಿರಿಯರಿದ್ದಾರೆ. ಅವರು ಸಹ ನಮ್ಮ ನಾಯಕರ ವಿರುದ್ಧ ಅವಾಚ್ಯ ಭಾಷೆ ಬಳಸುತ್ತಿದ್ದಾರೆ. ಈಶ್ವರಪ್ಪ ಅವರೇ ನಿಮ್ಮ ಪಕ್ಷದಲ್ಲಿಯೇ ಕೊಳೆತು ನಾರುತ್ತಿದೆ. ಈ ಬಗ್ಗೆ ನಾನು ನಿಮಗೆ ಬೈದರೆ ನಿಮಗೆ ತಡೆದುಕೊಳ್ಳುವ ಶಕ್ತಿ ಇಲ್ಲ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಇರುವುದಿಲ್ಲ ಎಂದಿದ್ದಾರೆ. ಈ ರೀತಿ ಹೇಳಿಕೆ ನೀಡಿದವರೇ ಮುಂದಿನ ಚುನಾವಣೆಯಲ್ಲಿ ಇರುವುದಿಲ್ಲ ಎಂದು ಬೇಳೂರು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ

Share This Article
Leave a Comment

Leave a Reply

Your email address will not be published. Required fields are marked *