ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ – 3 ಸಾವು, 32 ಮಂದಿ ಗಂಭೀರ

Public TV
1 Min Read

ಬೆಂಗಳೂರು: ಲಾರಿಗೆ ತಮಿಳುನಾಡು ಸಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 32 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರ್ನಾಟಕ ತಮಿಳುನಾಡು ಗಡಿ ಅತ್ತಿಬೆಲೆ ಸಮೀಪದ ಸುಳಗಿರಿ ಬಳಿ ನಡೆದಿದೆ.

ಈ ಘಟನೆಯಲ್ಲಿ ಬಸ್ ಚಾಲಕ ವೇಡಿಯಪ್ಪನ್ (46) ನಿರ್ವಾಹಕ ಸುಧಾಕರ್ (40) ಸೇರಿ ಮತ್ತೋರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 32 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಅಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರಿನಿಂದ ಕೃಷ್ಣಗಿರಿಗೆ ಹೊರಟಿದ್ದ ತಮಿಳುನಾಡು ಸಾರಿಗೆ ಬಸ್ ಸುಳಗಿರಿ ಬಳಿ ಬೇರೆ ವಾಹನವನ್ನು ಹಿಂದಿಕ್ಕುವ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜಾಗಿದ್ದು, ಮುಂದೆ ಕುಳಿತ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸುಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *