ಬೆನಕ ಅಮಾವಾಸ್ಯೆ: ಮಲೆ ಮಹದೇಶ್ವರನಿಗೆ 108 ಕುಂಭಾಭಿಷೇಕ

By
1 Min Read

ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Temple) ಶ್ರಾವಣ ಮಾಸದ ಕೊನೆ ದಿನವಾದ ಶನಿವಾರ ದೇವರಿಗೆ 108 ಕುಂಭಾಭಿಷೇಕ ನೆರವೇರಿತು.

ಶ್ರೀ ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೊದಲ ದಿನ ಮತ್ತು ಕಡೇ ದಿನದಂದು ದೇವರಿಗೆ 108 ಕುಂಭಗಳ ಪವಿತ್ರ ಜಲದಿಂದ ಅಭಿಷೇಕ ನೆರವೇರಿಸಲಿದ್ದು, ಅದರಂತೆ ಶನಿವಾರ ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಬೇಡಗಂಪಣ ಅರ್ಚಕರು ಮಜ್ಜನ ಬಾವಿಯಿಂದ ಪವಿತ್ರ ಜಲವನ್ನು ಮೆರವಣಿಗೆಯಲ್ಲಿ ತಂದರು. ಇದನ್ನೂ ಓದಿ: ಧರ್ಮಸ್ಥಳ ಷಡ್ಯಂತ್ರ ಕೇಸನ್ನ ರಾಜ್ಯ ಸರ್ಕಾರವೇ NIA ಗೆ ಕೊಡಬೇಕು: ಆರ್‌.ಅಶೋಕ್‌ ಆಗ್ರಹ

ಶ್ರೀ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠಾಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕರು ಮಜ್ಜನಬಾವಿಯಿಂದ 108 ಕುಂಭಗಳನ್ನು ಹೊತ್ತು ತಂದು ಹೋಮ ನೆರವೇರಿಸಿ ಸ್ವಾಮಿಗೆ ಅಭಿಷೇಕ ನೆರವೇರಿಸಿದರು.

ಜೊತೆಗೆ, 108 ಎಳನೀರುಗಳಿಂದಲೂ ಅಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ವಿಶೇಷ ಪೂಜೆ ನೆರವೇರಿತು. ಇದನ್ನೂ ಓದಿ: ಮಹೇಶ್ ತಿಮರೋಡಿಗೆ ಉಡುಪಿ ಕೋರ್ಟ್‌ನಿಂದ ಜಾಮೀನು ಮಂಜೂರು

Share This Article