ಗಣೇಶ ಹಬ್ಬ ಆಚರಿಸಲು ಅನುಮತಿ ಪಡೆಯುವ ನಿಯಮ ರದ್ದು ಮಾಡಿ: ಯತ್ನಾಳ್ ಮನವಿ

Public TV
1 Min Read

ಬೆಂಗಳೂರು: ಗಣೇಶ ಹಬ್ಬ ಆಚರಿಸಲು ಅನುಮತಿ ಪಡೆಯುವ ನಿಯಮ ರದ್ದು ಮಾಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.

ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಯತ್ನಾಳ್ ವಿಜೃಂಭಣೆಯಿಂದ ಗಣೇಶ ಚತುರ್ಥಿ ಆಚರಿಸಲು ಅವಕಾಶ ಮಾಡಿಕೊಡಿ. ಎಲ್ಲದಕ್ಕೂ ನಿರ್ಬಂಧ ಹಾಕಿದರೆ ಹಬ್ಬ ಆಚರಣೆ ಮಾಡಲು ಆಗುವುದಿಲ್ಲ ಎಂದು ಮನವಿ ಮಾಡಿದರು.

ಹಬ್ಬದಲ್ಲಿ ಡಿಜೆ ಹಾಕೋಕು ಅನುಮತಿ ಪಡೆಯಬೇಕು. ಹೀಗಾಗಿ ಧರ್ಮದ ಹಿರಿಯರು, ಸಂಘ ಸಂಸ್ಥೆಗಳು ನನ್ನ ಭೇಟಿಯಾಗಿ ಮನವಿ ಮಾಡಿದ್ದಾರೆ. ಸರ್ಕಾರದ ಹಬ್ಬ ಆಚರಣೆ ಮಾಡಲು ಅನುಮತಿ ಪಡೆಯುವ ನಿಯಮವನ್ನು ರದ್ದುಗೊಳಿಸಬೇಕು. ಹಿಂದೂಗಳು ನಿರ್ಭೀತಿ ಇಂದ ಹಬ್ಬ ಆಚರಿಸಲು ಅವಕಾಶ ಮಾಡಿಕೊಡಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಚಳುವಳಿ ಮಾಡುತ್ತೇವೆ ಎಂದು ನನ್ನ ಬಳಿ ಹೇಳಿದ್ದಾರೆ. ಹೀಗಾಗಿ ನಾನು ಇಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *