ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರು ಗಂಭೀರ

Public TV
1 Min Read

ಬೆಂಗಳೂರು: ಜಲಮಂಡಳಿ (BWSSB) ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ನಡೆದಿದೆ.

ಸದ್ದಾಂ ಪಾಷಾ(20) ಸಾವನ್ನಪ್ಪಿದ್ದರೆ, ಉಮ್ರಾನ್ ಪಾಷಾ ಮತ್ತು ಮುಬಾರಕ್‌ ಪಾಷಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೆಜೆ ನಗರ (JJ Nagara) ಮೂಲದ ಇವರು ಒಂದೇ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಮೋದಿ ಬಂದರೂ ಪ್ರತಿಷ್ಠೆ ಬಿಡದ ಪ್ರೀತಂಗೌಡ, ಪ್ರಜ್ವಲ್!

ಜಲ ಮಂಡಳಿಯವರು ಪೈಪ್ ಹಾಕಲು ಹಳ್ಳ ತೆಗೆದು ಬ್ಯಾರಿಕೇಡ್ ಹಾಕಿದ್ದರು. ಕೊಮ್ಮಘಟ್ಟ ಸರ್ಕಲ್‌ ಬಳಿ ಬರುವಾಗ ಬ್ಯಾರಿಕೇಡ್‌ ನಡುವಿನ ಸಣ್ಣ ಜಾಗದಲ್ಲಿ ವೇಗವಾಗಿ ದ್ವಿಚಕ್ರ ಚಲಾಯಿಸಿದ ಪರಿಣಾಮ ಸವಾರ ಸದ್ದಾಂ ಪಾಷಾ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಕೂಡಲೇ ನೆರವಿಗೆ ದಾಖಲಿಸಿದ ಸ್ಥಳೀಯರು ಗಾಯಾಳುಗಳನ್ನು ಗುಂಡಿಯಿಂದ ಮೆಲಕ್ಕೆ ಎತ್ತು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಇದನ್ನೂ ಓದಿ: ಹಿಂದುತ್ವದ ಭದ್ರಕೋಟೆಯಲ್ಲಿ‌ ಮೋದಿ‌‌ ಕಮಾಲ್- ಫೋಟೋಗಳಲ್ಲಿ ನೋಡಿ

 

Share This Article