ಬಿಜೆಪಿ, ಆರ್‌ಎಸ್‌ಎಸ್‌ ಕನಸು ನನಸಾಗಿದೆ: ತೇಜಸ್ವಿನಿ ಅನಂತ್ ಕುಮಾರ್

Public TV
1 Min Read

ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕನಸು ನನಸಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹೇಳಿದ್ದಾರೆ.

ಅಯೋಧ್ಯೆ ತೀರ್ಪು ವಿಚಾರವಾಗಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿ ಮಾತನಾಡಿದ ತೇಜಸ್ವಿನಿ ಅನಂತ್ ಕುಮಾರ್, ಅಂದು ಎಲ್.ಕೆ. ಅಡ್ವಾಣೆ ನೇತೃತ್ವದಲ್ಲಿ ರಾಮ ರಥಯಾತ್ರೆ ಮಾಡಿದ್ದು ಇಂದು ಸಾರ್ಥಕವಾಯ್ತು ಎಂದು ಹೇಳಿದರು.

ಅಡ್ವಾಣಿ ಜೊತೆ ಅನಂತ್ ಕುಮಾರ್ ಕೂಡ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಭಾರತೀಯ ಜನತಾ ಪಕ್ಷ ಮತ್ತು ಸಂಘ ಪರಿವಾರದ ಕನಸು ನನಸಾಗಿದೆ. ಆದ್ದರಿಂದ ಅಯೋಧ್ಯೆ ತೀರ್ಪು ಸ್ವಾಗತಾರ್ಹ ಎಂದು ಹೇಳಿದರು. ಉಪ ಚುನಾವಣೆಯ ವೇಳೆ ನಾನು ರಾಜಕೀಯದ ಬಗ್ಗೆ ಮಾತನಾಡಲಾರೆ. ಉಪ ಚುನಾವಣೆ ಸ್ಪರ್ಧೆ ಬಗ್ಗೆಯೂ ನಾನು ಏನು ಉತ್ತರಿಸಲಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *