ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕ ಸಾವು

Public TV
1 Min Read

– ವೈದ್ಯ ಪೊಲೀಸರ ವಶಕ್ಕೆ

ಬೆಂಗಳೂರು: ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಸರ ಘಟ್ಟದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಶಂಕರ್ ಮೃತಪಟ್ಟ ಬಾಲಕ. ಶಂಕರ್ ಗೆ ಬಲಗಣ್ಣಿನಲ್ಲಿ ಸಮಸ್ಯೆ ಇದ್ದ ಕಾರಣ ಹೆಸರಘಟ್ಟ ರಸ್ತೆಯ ಮಂಜುನಾಥ ಕಣ್ಣಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಸ್ತ್ರಚಿಕಿತ್ಸೆ ನಡೆಸಿದ ಕೆಲವೇ ಗಂಟೆಗಳಲ್ಲಿ ಉಸಿರಾಟದ ಸಮಸ್ಯೆಯಿಂದ ಬಾಲಕ ಶಂಕರ್ ಮೃತಪಟ್ಟಿದ್ದಾನೆ. ಶಸ್ತ್ರಚಿಕಿತ್ಸೆ ವೇಳೆ ಅತಿಯಾದ ಓವರ್ ಡೋಸ್ ನೀಡಿದ್ದೇ ಬಾಲಕನ ಸಾವಿಗೆ ಕಾರಣ ಅಂತ ಪೋಷಕರು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆ ವೈದ್ಯ ಮಂಜುನಾಥ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *