ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡ ನೇಣಿಗೆ ಶರಣು

Public TV
1 Min Read

ಬೆಂಗಳೂರು: ಕಾಂಗ್ರೆಸ್ ಮುಖಂಡ ನೇಣಿಗೆ ಶರಣಾದ ಘಟನೆಯೊಂದು ಬೆಂಗಳೂರಿನ ಯಲಹಂಕ ನ್ಯೂಟೌನ್‍ನಲ್ಲಿ ನಡೆದಿದೆ.

ವೀರಣ ಗೌಡ(50) ಆತ್ಮಹತ್ಯೆ ಮಾಡಿಕೊಂಡ ಮುಖಂಡ. ವೀರಣ್ಣ ಗೌಡ ಅವರು ಮೂಲತಃ ಹೆಸರುಘಟ್ಟ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 7:30ರ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಲವು ವರ್ಷಗಳಿಂದ ವೀರಣ್ಣ ಗೌಡ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ ವೀರಣ್ಣ ವೃತ್ತಿಯಲ್ಲಿ ರಿಯಲ್ ಎಸ್ಟೇಟ್ ಹಾಗೂ ಉದ್ಯಮಿ ಆಗಿದ್ದರು. ವೀರಣ್ಣ ಅವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.

ಈ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *