ಕೊರೊನಾ – ವಿದೇಶಿಗಳಲ್ಲಿನ ಕನ್ನಡಿಗರ ರಕ್ಷಣೆಗೆ ಮನವಿ

Public TV
1 Min Read

ಬೆಂಗಳೂರು: ಇಟಲಿ ಸೇರಿದಂತೆ ಜಗತ್ತಿನ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕೊರೊನಾ ವೈರಸ್ ಹಿನ್ನಲೆಯಲ್ಲಿ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ ಕರೆ ತರಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದೆ.

ಕೇಂದ್ರ ಸರ್ಕಾರವು ಈಗಾಗಲೇ ವಿವಿಧ ದೇಶಗಳಲ್ಲಿರುವ ಭಾರತೀಯರನ್ನು ಏರ್ ಲಿಫ್ಟ್ ಮಾಡುತ್ತಿರುವ ಬೆನ್ನಲ್ಲಿಯೇ ರಾಜ್ಯ ಸರ್ಕಾರವೂ ಕನ್ನಡಿಗರನ್ನು ವಾಪಸ್ ಕರೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಈ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆ ಬುಧವಾರ ಮಾತನಾಡಿದ್ದಾರೆ. ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕೂಡ ಉಳಿದವರ ಜೊತೆ ವಾಪಸ್ ಕರೆ ತರಲಾಗುವುದು. ಭಾರತದಿಂದಲೇ ವಿವಿಧ ದೇಶಗಳಿಗೆ ತಜ್ಞ ವೈದ್ಯರನ್ನು ಕಳಿಸಿ ಅಲ್ಲಿಯೇ ಪ್ರತಿಯೊಬ್ಬರನ್ನು ತೀವ್ರವಾಗಿ ತಪಾಸಣೆಗೆ ಒಳಪಡಿಸಿ ವಾಪಸ್ ಕರೆತರಲಾಗುವುದು ಎಂದು ಕೇಂದ್ರವು ರಾಜ್ಯಕ್ಕೆ ಭರವಸೆ ನೀಡಿದೆ.

ಕಚೇರಿ ಬಂದ್ ಇಲ್ಲ
ಸರ್ಕಾರಿ ಸೇರಿದಂತೆ ಯಾವುದೇ ಕಚೇರಿಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿಲ್ಲ ಎಂದು ಅಶ್ವತ್ಥನಾರಾಯಣ ಸ್ಪಷ್ಟ ಪಡಿಸಿದರು. ಚಿಕನ್ ತಿಂದರೆ ಕೊರೊನಾ ಬರುತ್ತದೆ ಎನ್ನುವುದು ಸುಳ್ಳ. ಈ ಕುರಿತ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *