ಡಿಕೆಶಿ ಚಾಲಕನಿಗೆ ಬಂಧನ ಭೀತಿ

Public TV
1 Min Read

ಬೆಂಗಳೂರು: ಹೈಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಕಾರು ಚಾಲಕ ರಾಜೇಂದ್ರನಿಗೆ ಬಂಧನ ಭೀತಿ ಎದುರಾಗಿದೆ.

ದೆಹಲಿಯಲ್ಲಿ ಡಿಕೆಶಿ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ ಬೆಂಗಳೂರಿನಿಂದ ದೆಹಲಿಗೆ ಹೋಗುವ ಹಣವನ್ನು ಪಡೆಯುವ ಕೆಲಸ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ಇಡಿ ಅಧಿಕಾರಿಗಳು ಅವರನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದಾರೆ.

ಡಿಕೆಶಿ ಅವರ ಪ್ರಕರಣದಲ್ಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಮೂವರಿಗೆ ಕೋರ್ಟ್ 11 ದಿನಗಳ ಕಾಲ ರಿಲೀಫ್ ನೀಡಿತ್ತು. ಆದರೆ ಹೈಕೋರ್ಟ್ ಅಲ್ಲಿ ಅರ್ಜಿ ಸಲ್ಲಿಕೆ ಮಾಡದೇ ಹಿಂದೆ ಸರಿದಿದ್ದ ರಾಜೇಂದ್ರ ಅವರನ್ನು ಬಂಧಿಸಲು ಇಡಿ ಅಧಿಕಾರಿಗಳು ಹುಡುಕಾಟ ಮಾಡುತ್ತಿದ್ದಾರೆ ಎನ್ನುವ ವಿಚಾರ ಲಭ್ಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *