ಬೆಂಗಳೂರು| ಬೀಳುವ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಆರಂಭ

Public TV
1 Min Read

ಬೆಂಗಳೂರು: ಬಾಬುಸಪಾಳ್ಯ ಕಟ್ಟಡ ದುರಂತ ಬಳಿಕ ಬಿಬಿಎಂಪಿ ಎಚ್ಚರಗೊಂಡಿದ್ದು ಬೀಳುವ ಹಂತದಲ್ಲಿದ್ದ ಮತ್ತೊಂದು ಅನಧಿಕೃತ ಕಟ್ಟಡದ ತೆರವು ಕಾರ್ಯಾಚರಣೆ ಆರಂಭವಾಗಿದೆ.

ಮಹಾದೇವಪುರ ವಲಯದ ಹೊರಮಾವಿನ ನಂಜಪ್ಪ ಗಾರ್ಡನ್‌ನಲ್ಲಿ ಪುಟ್ಟಪ್ಪ ಎಂಬವರು 10*25 ಅಡಿಯಲ್ಲಿ ಜಾಗದಲ್ಲಿ 6 ಅಂತಸ್ತಿನ ಕಟ್ಟಡವನ್ನು ನಿರ್ಮಿಸಿದ್ದರು.

ವಾಲಿಕೊಂಡಿರುವ ಕಟ್ಟಡವನ್ನು ತೆರವುಗೊಳಿಸಲು ಬಿಬಿಎಂಪಿ ಸೂಚನೆ ನೀಡುತ್ತಿದ್ದಂತೆ ಸ್ವಯಂಪ್ರೇರಿತವಾಗಿ ಮಾಲೀಕರೇ ಈಗ ಕಟ್ಟಡ ತೆರವು ಮಾಡಲು ಮುಂದಾಗಿದ್ದಾರೆ.  ಇದನ್ನೂ ಓದಿ: ಶಿವಮೊಗ್ಗ| ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು

ಕಟ್ಟಡ ತೆರವು ಮಾಡದಿದ್ದರೆ ಕ್ರಿಮಿನಲ್‌ ಕೇಸ್‌ ಹಾಕುವ ಎಚ್ಚರಿಕೆಯನ್ನು ಪಾಲಿಕೆ ನೀಡಿತ್ತು. ಈ ಬೆನ್ನಲ್ಲೇ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ಮಾಲೀಕರೇ ಈ ಕಟ್ಟಡವನ್ನು ತೆರವು ಮಾಡಲು ಮುಂದಾಗಿದ್ದಾರೆ.

ಅಕ್ಕಪಕ್ಕದಲ್ಲಿ ಮನೆಗಳು ಇರುವ ಕಾರಣ ಈಗ ಕೆಲಸಗಾರರು ಸುತ್ತಿಗೆಯಿಂದ ಬಡಿದು ಕಟ್ಟಡವನ್ನು ಒಡೆಯುತ್ತಿದ್ದಾರೆ. ಮೇಲ್ಭಾಗ ಕಟ್ಟಡ ತೆರವು ಮುಗಿದ ಬಳಿಕ ಜೆಸಿಬಿ ಮೂಲಕ ಕಾರ್ಯಾಚರಣೆ ಮಾಡಲಾಗುತ್ತದೆ.

 

Share This Article