ಅನಾರೋಗ್ಯದಿಂದ ಬಳಲುತ್ತಿದ್ದ ವೈದ್ಯ ಬೆಂಗ್ಳೂರಿನ ಸರ್ಕಾರಿ ಆಸ್ಪತ್ರೆ ವಾರ್ಡ್‌ನಲ್ಲೇ ನೇಣಿಗೆ ಶರಣು

Public TV
1 Min Read

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ವೈದ್ಯ ಬೆಂಗಳೂರಿನ ಸರ್ಕಾರಿ ಆಸ್ಪತ್ರೆ ವಾರ್ಡ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಇವರು ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ – ಶ್ರೀನಿವಾಸ್ ಪ್ರಸಾದ್ ಲೇವಡಿ

ಮಕ್ಕಳ ತಜ್ಞರಾಗಿದ್ದ ವೈದ್ಯ ಡಾ.ಎಸ್.ರೇಣುಕಾನಂದ ಅವರು ಆಸ್ಪತ್ರೆಯ ವಾರ್ಡ್‌ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೆಡ್‌ಶೀಟ್‌ನಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೇಣುಕಾನಂದ ಬಾಲ್ಯದಿಂದಲೇ ಪೋಲಿಯೋದಿಂದ ಅಂಗವೈಕಲ್ಯತೆ ಹೊಂದಿದ್ದರು. ಹೀಗಾಗಿ ಹಲವು ದಿನಗಳಿಂದ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತಿದ್ದರು. ಬೆಳಗ್ಗೆ 11:30 ರ ವೇಳೆಗೆ ರೌಂಡ್ಸ್ ಮುಗಿಸಿ ಬಂದು ಡ್ಯೂಟಿ ರೂಂಗೆ ತೆರಳಿದ್ದರು. ಮನೆಯಿಂದ ತಾಯಿಯ ಸೀರೆ ತೆಗೆದುಕೊಂಡು ಬಂದು ನೇಣು ಹಾಕಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಪತ್ನಿ-ಮಕ್ಕಳು, ತಂದೆ-ತಾಯಿಗೆ ಕ್ಷಮೆಯಾಚಿಸಿದ್ದಾರೆ. ಮಧ್ಯಾಹ್ನದ ವೇಳೆ ಪತಿಗೆ ಪತ್ನಿ ಕರೆ ಮಾಡಿದ್ದರು. ಹಲವು ಬಾರಿ ಕರೆ ಮಾಡಿದ್ರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ ಗಾಬರಿಗೊಂಡು ಪತಿಯ ಸಹೋದ್ಯೋಗಿಗಳಿಗೆ ಪತ್ನಿ ಕರೆ ಮಾಡಿದ್ದರು. ಇದನ್ನೂ ಓದಿ: ಆಸ್ಪತ್ರೆಯಲ್ಲೇ ಕುಳಿತು ಪ್ರಚಾರದ ರೂಟ್ ಮ್ಯಾಪ್ ಸಿದ್ಧಪಡಿಸಿದ ಹೆಚ್‌ಡಿಕೆ

ಆಸ್ಪತ್ರೆ ಸಿಬ್ಬಂದಿ ಗಮನಿಸಿ ತಿಲಕನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article