ಕೇಂದ್ರ ಕಾರ್ಮಿಕ ಭವನಕ್ಕೆ ಸಚಿವರ ದಿಢೀರ್ ಭೇಟಿ – ಅಧಿಕಾರಿಗಳು ಕಂಗಾಲು

Public TV
2 Min Read

ಬೆಂಗಳೂರು: ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವರು ಇಂದು ದಿಢೀರ್ ಆಗಿ ಕೇಂದ್ರ ಕಾರ್ಮಿಕಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯಲ್ಲಿ ಕೆಲ ಹೊಸ ವ್ಯವಸ್ಥೆಗಳನ್ನು ಮಾಡಬೇಕು. ಅಲ್ಲದೇ ವೇಗದ ಕಾರ್ಯಕ್ಕೆ ಚುರುಕು ಮುಟ್ಟಿಸಬೇಕು ಎಂದು ದಿಢೀರ್ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದೇನೆ. ಯಾವ ಕೆಲಸ ನಡೆಯಬೇಕಿದೆ. ಯಾವೆಲ್ಲ ಕೆಲಸಗಳನ್ನು ಅರ್ಥದಲ್ಲೇ ನಿಲ್ಲಿಸಲಾಗಿದೆ. ಕಾರ್ಮಿಕರಿಗೆ ಏನು ಅನುಕೂಲವಾಗಿದೆ ಎಂದು ಮಾಹಿತಿ ಪಡೆಯಲು ಆಗಮಿಸಿದ್ದಾಗಿ ತಿಳಿಸಿದರು.

ಇದೇ ವೇಳೆ ಕಾರ್ಮಿಕಭವನದ ಕೆಲ ಕುಂದುಕೊರತೆಗಳು ಗಮನಕ್ಕೆ ಬಂದಿರುವುದಾಗಿ ತಿಳಿಸಿದ ಅವರು, ಅಧಿಕಾರಿಗಳ ಹಾಜರಾತಿ, ಮೂಮೆಂಟ್ ಬುಕ್ ನಲ್ಲಿ ಸರಿಯಾಗಿ ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಅಲ್ಲದೇ ಬಾಲ ಕಾರ್ಮಿಕರ ಬಳಕೆ ಕುರಿತು ಮಾಹಿತಿ ಪಡೆದು, ಬಾಲ ಕಾರ್ಮಿರನ್ನು ಎಲ್ಲಯಾದರೂ ದುಡಿಮೆ ಮಾಡಿಕೊಳ್ಳುವ ಕುರಿತು ತಿಳಿದು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಆಯುಕ್ತೆ ಇರುಸು ಮುರುಸು: ತಮ್ಮ ದಿಢೀರ್ ಭೇಟಿ ವೇಳೆ ಸಚಿವರು ಕಾರ್ಮಿಕ ಭವನದ ಶೌಚಾಲಯಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಶೌಚಾಲಯದ ಅವ್ಯವಸ್ಥೆ ಕಂಡು ಕಾರ್ಮಿಕ ಇಲಾಖೆ ಆಯುಕ್ತೆ ಚೈತ್ರಗೆ ಪುರುಷರ ಶೌಚಾಲಯ ದರ್ಶನ ಮಾಡಿಸಿದರು. ದೂರದಲ್ಲಿದ್ದ ಆಯುಕ್ತೆ ಚೈತ್ರರವರನ್ನು ಕರೆದು ಏನು ಪರಿಸ್ಥಿತಿ ಎಂದು ಪ್ರಶ್ನಿಸಿ ಶೌಚಲಯಕ್ಕೆ ಹೋಗಲು ಹೇಳಿದರು. ಇದರಿಂದ ಕೆಲ ಸಮಯ ಆಯುಕ್ತೆ ಚೈತ್ರಾ ಇರುಸು ಮುರುಸುಗೊಂಡರು. ಇನ್ನು ಇದಕ್ಕೂ ಮೊದಲು ಕಚೇರಿ ಬಂದಾಗ ಅಲ್ಲಿರುವ ನೌಕರರನ್ನು ಗುರುತು ಹಿಡಿಯಲಿಲ್ಲ. ಆಗ ಸಚಿವರು ತಮ್ಮ ರೀತಿಯಲ್ಲಿ ಮಾತನಾಡಿದ ವೇಳೆ ನೌಕರರು ಅವರ ಗುರುತು ಹಿಡಿದರು.

ಅಧಿಕಾರಿ ಸಸ್ಪೆಂಡ್: ಇದೇ ವೇಳೆ ಕೆಲಸದ ಸಮಯದಲ್ಲಿ ಸೂಕ್ತ ಕಾರಣವಿಲ್ಲದೇ ಗೈರುಹಾಜರಾಗಿದ್ದ ಕಾರ್ಮಿಕ ಇಲಾಖೆಯ ಇನ್ಸ್ ಪೆಕ್ಟರ್ ನಾಗರಾಜಯ್ಯ ರನ್ನು ಅಮಾನತು ಮಾಡುವಂತೆ ಸಚಿವರು ಆಯುಕ್ತೆಗೆ ಆದೇಶ ನೀಡಿದರು. ಬಳಿಕ ಕಚೇರಿ ಸಮಯದಲ್ಲಿ ಆಫೀಸ್ ಕೆಲಸ ಬಿಟ್ಟು ಬಿಟ್ಟು ಬೇರೆಡೆ ಹೋಗಿದ್ದು ಕುರಿತು ವಿಚಾರಣೆ ನಡೆಸಿದರು. ಬಳಿಕ ಹಾಜರಾತಿ ಇಲ್ಲದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಸೂಚನೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *