ಫುಡ್ ಆರ್ಡರ್ ಪಡೆಯುವ ವಿಚಾರಕ್ಕೆ ಜಗಳ- ಸ್ನೇಹಿತನನ್ನೇ ಕೊಲೆಗೈದಿದ್ದವರು ಅಂದರ್

Public TV
1 Min Read

ಬೆಂಗಳೂರು: ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ, ಆರೋಪಿಗಳನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್ ಹಾಗೂ ತೇಜಸ್ ಬಂಧಿತ ಆರೋಪಿಗಳು. ಬಿಟಿಎಂ ಲೇಔಟ್ 2ನೇ ಹಂತದ 16 ಮೇನ್ ಮನೆಯೊಂದರಲ್ಲಿ ಫೆಬ್ರವರಿ 28ರ ಬೆಳಗ್ಗೆ ಸುನಿಲ್‍ನನ್ನು (28) ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.

ಸುನಿಲ್, ಆರೋಪಿಗಳಾದ ಪ್ರವೀಣ್ ಮತ್ತು ತೇಜಸ್ ಖಾಸಗಿ ಫುಡ್ ಡೆಲಿವರಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಫುಡ್ ಆರ್ಡರ್ ಪಡೆದುಕೊಳ್ಳುವ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದರು. ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತ ಎನ್ನುವುದನ್ನೂ ನೋಡದೆ ಆರೋಪಿಗಳು  ಮಾರಣಾಂತಿಕ ಹಲ್ಲೆ ಮಾಡಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಸುನಿಲ್‍ನನ್ನ ಸ್ಥಳೀಯರು ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಮಾರ್ಚ್ 4ರಂದು ಮೃತಪಟ್ಟಿದ್ದ. ಇತ್ತ ಆರೋಪಿಗಳು ಕೃತ್ಯದ ಬಳಿಕ ತುಮಕೂರಿನಲ್ಲಿ ತಲೆಮರೆಸಿಕೊಂಡಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮೈಕೋ ಲೇಔಟ್ ಪೊಲೀಸರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದರು. ಪ್ರವೀಣ್ ಮತ್ತು ತೇಜಸ್ ತುಮಕೂರಿನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ತಂಡವನ್ನು ರಚಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *