ಅನಿಶ್ಚಿತತೆ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿದ ಸಚಿವ ಸುನಿಲ್ ಕುಮಾರ್

Public TV
1 Min Read

ಬೆಂಗಳೂರು: ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುತ್ತಿರುವ ನಡೆಯುತ್ತಿರುವ “ಅನಿಶ್ಚಿತತೆ” ಕಲಾಪ್ರದರ್ಶನವನ್ನು ಇಂದು ಮುಂಜಾನೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕಲಾವಿದರೊಂದಿಗೆ ಅವರ ಕಲಾಕೃತಿಗಳನ್ನು ನೋಡಿದ್ದು ಕೆಲಸಮಯ ಬೇರೆಯದೇ ಲೋಕದಲ್ಲಿ ಸಂಚರಿಸಿದ ಅನುಭವ ನೀಡಿತು ಎಂದರು.

ಕೊರೊನಾ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರಲ್ಲೂ ಉಂಟಾದ ಅನಿಶ್ಚಿತತೆ ಭಾವವನ್ನು, ಗ್ರಾಫಿಕ್ ಮುದ್ರಣ ಕಲೆಯ ಮೂಲಕ ಕರ್ನಾಟಕದ ವಿವಿಧ ಭಾಗಗಳ 75 ಕಲಾವಿದರುಗಳು ಅತಿ ಸುಂದರ ಹಾಗೂ ಮನಸ್ಸಿನ ಆಳದಲ್ಲಿ ನಮ್ಮನ್ನು ಚಿಂತನೆಗೆ ಒಳಪಡಿಸುವಂತಹ ಕಲಾಕೃತಿಗಳನ್ನು ರಚಿಸಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ನಾನು ಸಾಮಾನ್ಯ ಮುನುಷ್ಯ, ನನಗೆ ಸೆಕ್ಯೂರಿಟಿ ಬೇಡ: ಪಂಜಾಬ್ ಸಿಎಂ

ದೇಶದಲ್ಲೇ ದೊಡ್ಡಮಟ್ಟದ ಗ್ರಾಫಿಕ್ ಮುದ್ರಣ ಕಲಾ ಪ್ರದರ್ಶನ ನಮ್ಮ ಕರ್ನಾಟಕದ ಕಲಾವಿದರುಗಳಿಂದ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ನಮ್ಮ ನಾಡು, ನುಡಿ, ಸಂಸ್ಕೃತಿಯ ಉಳಿವು ಹಾಗೂ ಅಭಿವೃದ್ಧಿಗಾಗಿ ಕಲಾವಿದರುಗಳು ಮಾಡುವ ಪ್ರತಿಯೊಂದು ಕೆಲಸಕ್ಕೂ ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಕಲಾವಿದರಿಗೆ ತಿಳಿಸಲಾಯಿತು ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *