ಬೆಂಗಳೂರು: ಸಂಪುಟ ವಿಸ್ತರಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ 17 ಶಾಸಕರಲ್ಲಿ ಯಾರೆಲ್ಲ ಸಚಿವರಾಗುತ್ತಾರೆ ಎಂಬ ಪ್ರಶ್ನೆ ಎದುರಾಗಿದೆ.
ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್ಗೆ ಸಚಿವ ಸ್ಥಾನ ಸಿಗುತ್ತಾ ಎನ್ನುವುದು ಯಕ್ಷ ಪ್ರಶ್ನೆಯಾಗಿದ್ದು, ಇದಕ್ಕೆ ಮಾಜಿ ಸಚಿವ ಎಂಟಿಬಿ ನಾಗರಾಜು ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು ಹೊರವಲಯ ಮಹಾದೇವಪುರದ ಗರುಡಾಚಾರ್ ಪಾಳ್ಯದಲ್ಲಿ ಮಾತನಾಡಿದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಸಿಎಂ ಯಡಿಯೂರಪ್ಪ ನಮ್ಮ ನಡುವೆ ಮಾತುಕತೆ ಚರ್ಚೆ ಎಲ್ಲ ನಡೆದು ಅಂತಿಮವಾಗಿ ನಾವು ರಾಜೀನಾಮೆ ನೀಡಿದ್ದೇನೆ ಎಂದರು.
ನಾನು ಮಂತ್ರಿಯಾಗಿ ರಾಜೀನಾಮೆ ನೀಡಿದ್ದೇನೆ. ಸೋಲು ಗೆಲ್ಲುವ ಮುಖ್ಯವಲ್ಲ, 17 ಜನಕ್ಕೂ ಪ್ರಾಮುಖ್ಯತೆ ನೀಡಬೇಕು. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಬಚ್ಚೇಗೌಡ ಹಾಗೂ ಶರತ್ರಿಂದ ನನಗೆ ಸೋಲಾಗಿದೆ. ಪಕ್ಷ ದ್ರೋಹ ಮಾಡಿದ ಅವರನ್ನು ಪಕ್ಷಕ್ಕೆ ಸೇರಿಸಕೊಳ್ಳಲ್ಲ ಅಂತ ಹೇಳಿ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ಅದೇ ರೀತಿ ನಮಗೆ ಕೊಟ್ಟ ಭರವಸೆ ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.