ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

Public TV
1 Min Read

ಮಂಡ್ಯ: ಬಹುನೀರೀಕ್ಷಿತ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು (Mysuru Bengaluru Expressway) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯದಲ್ಲಿ (Mandya) ಭಾನುವಾರ ಲೋಕಾರ್ಪಣೆಗೊಳಿಸಿದರು.

ಬೆಂಗಳೂರು ಟು ಮೈಸೂರು ಸುಗಮ ಸಂಚಾರಕ್ಕಾಗಿ ನಿರ್ಮಾಣ ಆಗಿರುವ 118 ಕಿ.ಮೀ ಉದ್ದದ ಬೆಂಗಳೂರು – ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಲೋಕಾರ್ಪಣೆ ಆಗಿದೆ. 11 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಎಕ್ಸ್‌ಪ್ರೆಸ್ ಹೈವೇಯನ್ನು ಮಂಡ್ಯ ಬಳಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಇದನ್ನೂ ಓದಿ: ದಶಪಥ ಹೆದ್ದಾರಿ ಲೋಕಾರ್ಪಣೆ – ಜನರಿಗೆ ಸಿದ್ಧವಾಗ್ತಿದೆ 60 ಕ್ವಿಂಟಲ್ ಬಾತ್, 25 ಕ್ವಿಂಟಲ್ ಮೊಸರನ್ನ

 ಈ ವೇಳೆ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಜೋಶಿ, ನಿತಿನ್‌ ಗಡ್ಕರಿ, ಸಂಸದರಾದ ಸುಮಲತಾ, ಪ್ರತಾಪ್​ ಸಿಂಹ, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಸೇರಿ ಹಲವರು ಭಾಗಿಯಾದರು. 1.8 ಕಿಲೋಮೀಟರ್ ರೋಡ್ ಶೋ ನಡೆಸಿದ ಬಳಿಕ ಹೆದ್ದಾರಿ ಉದ್ಘಾಟಿಸಿದರು. ಇದನ್ನೂ ಓದಿ:  ಮಂಡ್ಯದಲ್ಲಿ ಮೋದಿ ರೋಡ್ ಶೋ – ಸ್ವಾಗತಿಸಲು ನಿಂತಿದ್ದ ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ

Share This Article
Leave a Comment

Leave a Reply

Your email address will not be published. Required fields are marked *