ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಅಕ್ರಮ ಮರಳು ದಂಧೆಗೆ ಬ್ರೇಕ್

Public TV
1 Min Read

ನೆಲಮಂಗಲ: ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಪಬ್ಲಿಕ್ ಟಿವಿ ಇಂದು ಸುದ್ದಿ ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿಯಲ್ಲಿ ಇಂದು ಸುದ್ದಿ ಪ್ರಸಾರವಾಗುತ್ತಿದ್ದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ದಂಧೆಕೋರರು ಎಸ್ಕೇಪ್ ಆಗಿದ್ದಾರೆ.

ಅಕ್ರಮ ಮರಳು ದಂಧೆಕೋರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರ ಕೆರೆಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜೆಸಿಬಿ ಯಂತ್ರದ ಮೂಲಕ ಫಿಲ್ಟರ್ ಮರಳು ಅಡ್ಡೆಯನ್ನು ಪೊಲೀಸರು ಧ್ವಂಸಗೊಳಿಸಿದ್ದಾರೆ.

ಕೆರೆಯ ಸ್ಥಳದಲ್ಲಿದ್ದ ಟೆಂಟ್ ಕಿತ್ತು ಫಿಲ್ಟರ್ ಮಾಡಲು ಬಳಸುವ ಜಾಲರಿ ಉಪಕರಣಗಳ ಜೊತೆ ಮರಳು ಲೂಟಿಕೋರರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಯಾವ ವಸ್ತುಗಳನ್ನು ಬಿಡದೆ ತೆಗೆದುಕೊಂಡು ಎಸ್ಕೇಪ್ ಆಗಿದ್ದಾರೆ. ಅಕ್ರಮವಾಗಿ ಪಡೆದಿದ್ದ ವಿದ್ಯುತ್ ಸಂಪರ್ಕ ಸಹ ಕಟ್ ಆಗಿದೆ. ಇಂದು ಪಬ್ಲಿಕ್ ಟಿವಿ ಈ ಬಗ್ಗೆ ಸುದ್ದಿ ಪ್ರಸಾರ ಮಾಡಿತ್ತು. ಸುದ್ದಿ ಬೆನ್ನಲ್ಲೇ ಎಚ್ಚೆತ್ತ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *