ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ವಶ- ಇಬ್ಬರು ಅರೆಸ್ಟ್

Public TV
1 Min Read

– ಮನೆಯಲ್ಲಿ ಸುರಂಗ ಮಾರ್ಗ ಮಾಡಿದ್ದ ಆರೋಪಿಗಳು

ಬೆಂಗಳೂರು: ಮನೆಯಲ್ಲಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ರಕ್ತಚಂದನವನ್ನು ಪೊಲೀಸರು ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.

ಆಂಧ್ರ ಪ್ರದೇಶ ಮೂಲದ ಮಜೀದ್ ಹಾಗೂ ಬಷೀರ್ ಬಂಧಿತ ಆರೋಪಿಗಳು. ಆರೋಪಿಗಳು ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸುರಂಗ ಮಾರ್ಗ ನಿರ್ಮಿಸಿ, ಅದರಲ್ಲಿ ರಕ್ತಚಂದನವನ್ನು ಬಚ್ಚಿಟ್ಟಿದ್ದರು. ಬಂಧಿತರಿಂದ ಪೊಲೀಸರು 2 ಟನ್ ರಕ್ತಚಂದನ ವಶಕ್ಕೆ ಪಡೆದಿದ್ದಾರೆ.

ಕಟ್ಟಿಗೇನಹಳ್ಳಿ ಗ್ರಾಮದ ಮನೆಯಲ್ಲಿ ರಕ್ತಚಂದನವನ್ನು ಬಚ್ಚಿಟ್ಟಿದ್ದ ಖಚಿತ ಮಾಹಿತಿ ಬೆಂಗಳೂರು ಗ್ರಾಮಾಂತರ ಪೋಲಿಸರಿಗೆ ಸಿಕ್ಕಿತ್ತು. ತಕ್ಷಣವೇ ವಿಶೇಷ ಕಾರ್ಯಚರಣೆ ನಡೆಸಿದ ಪೊಲೀಸರು ಮನೆಗೆ ಭೇಟಿ ನೀಡಿ ಹುಡುಕಾಟ ನಡೆಸಿದ್ದರು. ಆದರೆ ಎಲ್ಲಿಯೂ ರಕ್ತಚಂದನ ಪತ್ತೆಯಾಗಿರಲಿಲ್ಲ. ಹೀಗಾಗಿ ಮಜೀದ್ ಹಾಗೂ ಬಷೀರ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ರಕ್ತಚಂದನ ಬಚ್ಚಿಟ್ಟಿದ್ದ ಜಾಗವನ್ನು ಬಾಯಿಬಿಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *