ಮತ್ತೆ ಬೀದಿಗಿಳಿದ ಪೌರಕಾರ್ಮಿಕರು – ನೇಮಕಾತಿ ಷರತ್ತುಗಳ ಸಡಿಲಿಕೆಗೆ ಒತ್ತಾಯ

Public TV
1 Min Read

ಬೆಂಗಳೂರು: ಪೌರಕಾರ್ಮಿಕರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘದ ವತಿಯಿಂದ ಧರಣಿ ನಡೆಯಿತು.

ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ 18 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಎಂದು ಧರಣಿ ನಡೆಸಿದರು. ಸದ್ಯ ಪಾಲಿಕೆಯಲ್ಲಿ 4 ಸಾವಿರ ಪೌರಕಾರ್ಮಿಕರ ನೇಮಕಾತಿಗೆ ನೋಟಿಫಿಕೇಶನ್ ಹೊರಡಿಸಲಾಗಿದೆ. ಇದರಿಂದ ಶೇ.50 ರಷ್ಟು ಗುತ್ತಿಗೆ ಆಧಾರದ ಪೌರ ಕಾರ್ಮಿಕರಿಗೆ ಕೆಲಸವೇ ಸಿಗದಂತೆ ಆಗಲಿದೆ. ಹೀಗಾಗಿ ನೇಮಕಾತಿ ಷರತ್ತುಗಳನ್ನ ಬದಲಾಯಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಮುಖ ಬೇಡಿಕೆಗಳ ಪಟ್ಟಿ ಹೀಗಿದೆ;

1. ಗುತ್ತಿಗೆ ಆಧಾರದ ಎಲ್ಲ ಪೌರಕಾರ್ಮಿಕರ ಖಾಯಂಗೊಳಿಸಬೇಕು
2. ಕನ್ನಡ ಓದಲು ಬರೆಯಲು ಬರಬೇಕು ಎಂಬ ನಿಯಮ ತೆಗೆಯಬೇಕು
3. 45 ವರ್ಷಗಳ ವಯೋಮೀತಿಗೆ ನೇಮಕಾತಿ ಹೊರಡಿಸಿರೊದನ್ನು 55 ವರ್ಷಕ್ಕೆ ಏರಿಕೆ ಮಾಡಬೇಕು
4. ಆನ್ ಲೈನ್ ಅರ್ಜಿ ಸಲ್ಲಿಕೆಗೆ ಹೆಲ್ಪ್ ಲೈನ್ ಸಹಾಯ ಕೊಡಬೇಕು
5. ಪೌರಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಶಿಕ್ಷಣ ಕೊಡಿಸಲು ಸಹಾಯ ಮಾಡಬೇಕು

ಈ ಎಲ್ಲ ಬೇಡಿಕೆಗಳ ಆಧರಿಸಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಖುದ್ದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ವಿಶೇಷ ಆಯುಕ್ತ ಸಂದೀಪ್ ಭೇಟಿ ನೀಡಿ ಬೇಡಿಕೆಗಳ ಪರಿಶೀಲಿಸುವಯದಾಗಿ ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *