ಅಗ್ನಿ ಅವಘಡ – ಮಕ್ಕಳಿಬ್ಬರ ದುರ್ಮರಣ, ಪೋಷಕರು ಗಂಭೀರ

Public TV
1 Min Read

ಬೆಂಗಳೂರು: ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿ ಇದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿಯ ಭಕ್ಷಿಗಾರ್ಡನ್‍ನಲ್ಲಿ ನಡೆದಿದೆ.

ಮೃತ ದುರ್ದೈವಿ ಮಕ್ಕಳನ್ನು ಕಾವೇರಿ (21) ಶ್ರೀಕಾಂತ್ (13) ಎಂದು ಗುರುತಿಸಲಾಗಿದೆ. ಇವರ ಪೋಷಕರಾದ ಮುರಳಿ ಮತ್ತು ಗೀತಾರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಬಂದು ಪರೀಶಿಲನೆ ನಡೆಸಿರುವ ಪೊಲೀಸರು, ತಂದೆಯೇ ಮನೆಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಈಗ ದಂಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ವಿಚಾರಣೆ ನಂತರ ಸತ್ಯ ಹೊರಬರಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *