ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ-ಇಂದು ರೈತರ ಪ್ರತಿಭಟನೆ

Public TV
1 Min Read

-ರೈತರ ಬೇಡಿಕೆಗಳೇನು?
-ಮಾರ್ಗ ಬದಲಾವಣೆ ಹೀಗಿದೆ

ಬೆಂಗಳೂರು: ಸಿಲಿಕಾನ್ ಸಿಟಿಗೆ ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ ರೈತರು ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಬೀದಿಗೆ ಇಳಿಯಲಿದ್ದಾರೆ. ಇನ್ನೊಂದಡೆ ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲಿದೆ. ಸುಮಾರು ಐದು ಸಾವಿರಕ್ಕೂ ಹೆಚ್ಚು ರೈತರು ಇಂದು ಹನ್ನೊಂದು ಗಂಟೆಗೆ ಸಂಗೊಳ್ಳಿ ರಾಯಣ್ಣ ವೃತ್ತದಿಂದ ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ.

ಜೆಡಿಎಸ್ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಹನ್ನೊಂದು ಗಂಟೆಗೆ ಜೆಪಿ ಭವನದಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆ ಎಫೆಕ್ಟ್ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ. ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ 2 ಕಿ.ಮೀ. ನಿಷೇದಾಜ್ಞೆಯೂ ಜಾರಿಯಾಗಲಿದೆ.

ಇಲ್ಲಿ ಟ್ರಾಫಿಕ್ ಜಾಮ್:
1. ಮಂತ್ರಿಮಾಲ್ ರಸ್ತೆ,
2. ಶೇಷಾದ್ರಿಪುರಂ ರೋಡ್
3. ಮಜೆಸ್ಟಿಕ್ ಸುತ್ತಾಮುತ್ತ ರಸ್ತೆ
4. ಕಾರ್ಪೋರೇಷನ್ ಸರ್ಕಲ್
5. ವಿಧಾನಸೌಧ ಸುತ್ತಾಮುತ್ತ ರಸ್ತೆ
6. ಆನಂದ್ ರಾವ್ ಸರ್ಕಲ್ ಬಳಿ ಟ್ರಾಫಿಕ್ ಬಿಸಿ ಇರಲಿದೆ.

ಮಾರ್ಗ ಬದಲಾವಣೆ
* ಶೇಷಾದ್ರಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ
* ಆನಂದ ರಾವ್ ಫ್ಲೈಓವರ್ ಬಳಿ ಎಡ ತಿರುವು ಪಡೆದು ರೇಸ್ ಕೋರ್ಸ್ ರಸ್ತೆ ಕಡೆ ಸಂಚಾರಿಸಲು ಮಾರ್ಗ ಬದಲು
* ಸಿಐಡಿ ಜಂಕ್ಷನ್, ಪ್ಯಾಲೇಸ್ ರಸ್ತೆ ಮೂಲಕ ಕೆ ಆರ್ ಸರ್ಕಲ್ ಪ್ರವೇಶಿಸಲು ಸೂಚನೆ

ರೈತರ ಬೇಡಿಕೆಗಳೇನು?
1. ಉತ್ತರ ಕರ್ನಾಟಕದ ಪ್ರವಾಹ ದಲ್ಲಿ ಮನೆ ಕಳಕೊಂಡವರಿಗೆ ಹತ್ತು ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಬೇಕು.
2. ಎಕರೆಗೆ ಇಪ್ಪತ್ತೈದು ಸಾವಿರದಂತೆ ಪರಿಹಾರ ಕೊಡಬೇಕು
3. ಪ್ರವಾಹದಲ್ಲಿ ಪ್ರಾಣ ಕಳಕೊಂಡವರಿಗೆ 25 ಲಕ್ಷ ಪರಿಹಾರ ಕೊಡಬೇಕು.
4. ನಷ್ಟವಾದ ಕೃಷಿ ಭೂಮಿಗೆ ಪರಿಹಾರ ಕೊಡಬೇಕು, ಪರ್ಯಾಯ ಭೂಮಿ ಕೊಡಬೇಕು.
5. ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಗ್ರಾಮವನ್ನು ಸಂಪೂರ್ಣ ಸ್ಥಳಾಂತರ ಮಾಡಬೇಕು.
6. ಬ್ಯಾಂಕ್ ಗಳು ಪ್ರವಾಹದಿಂದ ತೊಂದರೆಗೆ ಒಳಗಾದ ರೈತರಿಗೆ ಸಾಲದ ನೋಟಿಸ್ ನೀಡೋದನ್ನು ನಿಲ್ಲಿಸಬೇಕು.

Share This Article
Leave a Comment

Leave a Reply

Your email address will not be published. Required fields are marked *