ಕಾವೇರಿ ನೀರಿನಲ್ಲಿ ಕಾರು ವಾಶ್‌: ಮಾಲೀಕರಿಗೆ 5 ಸಾವಿರ ದಂಡ ವಿಧಿಸಿದ ಜಲಮಂಡಳಿ

Public TV
1 Min Read

ಬೆಂಗಳೂರು: ಕಾವೇರಿ ನೀರಿನಿಂದ (Cauvery Water) ಕಾರನ್ನು ಸ್ವಚ್ಛಗೊಳಿಸಿದ ಮೂವರಿಗೆ ಬೆಂಗಳೂರು ಜಲಮಂಡಳಿ (BWSSB) 5 ಸಾವಿರ ರೂ. ದಂಡ (Fine) ವಿಧಿಸಿದೆ.

ಸದಾಶಿವನಗರದಲ್ಲಿ ಕಾರನ್ನು ಸ್ವಚ್ಛಗೊಳಿಸಿದ ಮಹಿಳೆಗೆ ಸ್ಥಳದಲ್ಲೇ 5 ಸಾವಿರ ದಂಡ ವಿಧಿಸಿದೆ. ಅದೇ ರೀತಿಯಲ್ಲಿ ಮಹಾದೇವಪುರ ಮತ್ತು ಡಾಲರ್ಸ್ ಕಾಲೋನಿಯಲ್ಲಿ ಇಬ್ಬರಿಗೆ ದಂಡ ವಿಧಿಸಲಾಗಿದೆ.  ಇದನ್ನೂ ಓದಿ: ಸೋನು ಶ್ರೀನಿವಾಸ ಗೌಡ ಯಾವುದೇ ಹಣದ ಸಹಾಯ ಮಾಡಿಲ್ಲ- ಪೊಲೀಸರಿಂದ ಸ್ಥಳ ಮಹಜರು

 

ಕಾರ್ ವಾಶ್, ಹೂ ತೋಟಕ್ಕೆ ಕಾವೇರಿ ನೀರು ಬಳಸದಂತೆ ಈಗಾಗಲೇ ಜಲಮಂಡಳಿ ಈಗಾಗಲೇ ಸೂಚನೆ ನೀಡಿದೆ. ಸೂಚನೆ ಹೊರತಾಗಿಯೂ ಕಾರನ್ನು (Car) ಸ್ವಚ್ಛ ಮಾಡಿದ್ದಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.

ವಾಹನ ತೊಳೆಯಲು, ತೋಟಗಾರಿಕೆ, ಫ್ಲಶ್ ಮಾಡಲು, ಪಾರ್ಕಿಂಗ್ ಪ್ರದೇಶವನ್ನು ಸ್ವಚ್ಛಗೊಳಿಸಲು ಹಾಗೂ ಇತ್ಯಾದಿ ಬಳಕೆಗೆ ಕುಡಿಯುವ ನೀರನ್ನು ಬಳಸದಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಜಲಮಂಡಳಿ ಪ್ರಕಟಣೆಯ ಮೂಲಕ ನಿಷೇಧ ಈಗಾಗಲೇ ಆದೇಶವನ್ನು ಜಾರಿ ಮಾಡಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ

 

Share This Article