ದಶಪಥ ಹೆದ್ದಾರಿ ತಡೆದು ಪ್ರತಿಭಟನೆ – ಲಾಠಿ ಬೀಸಿದ ಪೊಲೀಸರು

Public TV
1 Min Read

ಮಂಡ್ಯ: ಮೈಸೂರು-ಬೆಂಗಳೂರು (Mysuru-Bengaluru) ಹೆದ್ದಾರಿಯಲ್ಲಿ ಅಂಡರ್ ಪಾಸ್‌ ನಿರ್ಮಾಣ ಮಾಡದ್ದನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ (Lathi charge) ಮಾಡಿದ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮಸ್ಥರು ಅಂಡರ್ ಪಾಸ್‍ನ್ನು ತಮ್ಮೂರ ಬಳಿಯೇ ನಿರ್ಮಿಸಬೇಕು ಎಂದು ಈ ಹಿಂದೆ ಸಹ ಪ್ರತಿಭಟನೆ ಮಾಡಿದ್ದರು. ಆದರೆ ಗ್ರಾಮದ ಹೊರಗೆ ಅಂಡರ್ ಪಾಸ್ (Underpass) ನಿರ್ಮಾಣವಾಗಿತ್ತು. ಇದರ ವಿರುದ್ಧ ತಿರುಗಿಬಿದ್ದ ಊರಿನ ಗ್ರಾಮಸ್ಥರು ಇಂದು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಡರ್ ಪಾಸ್ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರದಿಂದ (National Highways Authority) ಅನುಮತಿ ಕೊಡಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.  ಇದನ್ನೂ ಓದಿ: ನನ್ನ ವಿರುದ್ಧ ಡಿಕೆ ಸಹೋದರರಿಬ್ಬರು ಸ್ಪರ್ಧಿಸಲಿ: ಮುನಿರತ್ನ

ಗ್ರಾಮಸ್ಥರು ರಸ್ತೆಗಳಿಗೆ ಎತ್ತಿನಗಾಡಿಗಳನ್ನು ನುಗ್ಗಿಸಿ, ಬೈಕ್, ಕಾರು, ಆಟೋಗಳನ್ನು ನಿಲ್ಲಿಸಿ ರಸ್ತೆ ವಾಹನಗಳನ್ನು ತಡೆದಿದ್ದಾರೆ. ಪ್ರತಿಭಟನೆಗೆ ರೈತ ಸಂಘ ಸಹ ಬೆಂಬಲ ಕೊಟ್ಟಿದ್ದು ಪ್ರತಿಭಟನೆ ಕಾವು ಹೆಚ್ಚಾಗಿತ್ತು. ಪ್ರತಿಭಟನೆಯಿಂದ ಕಿಲೋ ಮೀಟರ್‍ಗಟ್ಟಲೇ ಎರಡು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಪ್ರತಿಭಟನಾ ನಿರತರು ಹಾಗೂ ಪೊಲೀಸರ ನಡುವೆ ತಳ್ಳಾಟ ನಡೆದು, ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ತೆರವುಗೊಳಿಸುವಂತೆ ಪೊಲೀಸರು ಮನವಿ ಮಾಡಿಕೊಂಡರು ಬಗ್ಗದ ಗ್ರಾಮಸ್ಥರ ಮೇಲೆ ಲಾಠಿ ಬೀಸಿ ಗ್ರಾಮಸ್ಥರನ್ನು ಚದುರಿಸಿ ರಸ್ತೆಗೆ ಅಡ್ಡಲಾಗಿರಿಸಿದ್ದ ವಾಹನಗಳು ಹಾಗೂ ಶಾಮಿಯಾನವನ್ನು ತೆರುವುಗೊಳಿಸಿದ್ದಾರೆ. ಗ್ರಾಮಸ್ಥರ ಬೇಡಿಕೆಯನ್ನು ಅಧಿಕಾರಿಗಳ ಗಮನಕ್ಕೆ ತರುವ ಭರವಸೆಯನ್ನು ಎಸ್ಪಿ ಎನ್.ಯತೀಶ್ ನೀಡಿದ್ದಾರೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ರೈತ (Farmers) ಮುಖಂಡ ಮಧುಚಂದನ್ ಅವರನ್ನು ಬಲವಂತವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲು ಸಾಧ್ಯವಿಲ್ಲ: ಕೆಸಿ ವೇಣುಗೋಪಾಲ್

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *