ಬೆಸ್ಕಾಂ ನಿರ್ಲಕ್ಷ್ಯಕ್ಕೆ ಲೈನ್‌ ಮ್ಯಾನ್‌ ಸಾವು – FIR ದಾಖಲು

Public TV
1 Min Read

ಬೆಂಗಳೂರು: ಟ್ರಾನ್ಸ್‌ ಫಾರ್ಮರ್‌ ರಿಪೇರಿಗೆಂದು ಲೈಟ್‌ ಕಂಬ ಹತ್ತಿದ್ದಾಗ ವಿದ್ಯುತ್‌ ಪ್ರವಹಿಸಿ ಲೈನ್‌ಮ್ಯಾನ್‌ (Lineman) ಮೃತಪಟ್ಟ ಘಟನೆ ಬೆಂಗಳೂರಿನ (Bengaluru) ರಾಜಾಜಿನಗರದ ಗೋಪಾಲಪುರದಲ್ಲಿ ನಡೆದಿದೆ.

ಗೌತಮ್‌ ಮೃತ ದುರ್ದೈವಿ. ಕಳೆದ 6 ವರ್ಷಗಳಿಂದ ಗೌತಮ್‌ ಬೆಸ್ಕಾಂನಲ್ಲಿ ಲೈನ್‌ಮ್ಯಾನ್‌ ಆಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಭಾನುವಾರ ರಾತ್ರಿ ನೈಟ್‌ ಡ್ಯೂಟ್‌ಗೆ ಎಂದು ಹೋಗಿದ್ದ ಗೌತಮ್‌ ಸೋಮವಾರ ಬೆಳಗ್ಗೆ ರಾಜಾಜಿನಗರದ ಗೋಪಾಲಪುರದಲ್ಲಿ ಟ್ರಾನ್ಸ್‌ ಫಾರ್ಮರ್‌ (Transformer) ರಿಪೇರಿಗೆಂದು ಲೈಟ್‌ ಕಂಬ ಹತ್ತಿದ್ದಾಗ ವಿದ್ಯುತ್‌ ಪ್ರವಹಿಸಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾಗಡಿ ಮೂಲದವರಾದ ಗೌತಮ್‌ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಮದುವೆ ದಿನಾಂಕವನ್ನು ಫಿಕ್ಸ್‌ ಮಾಡುವುದಿನ್ನು ಬಾಕಿಯಿತ್ತು. ಆದರೆ ಅಷ್ಟರಲ್ಲಿ ಇಂಥ ದುರ್ಘಟನೆ ನಡೆದು ಹೋಗಿದೆ.

ಘಟನೆಯ ವೇಳೆ ಬೆಸ್ಕಾಂ ಇಲಾಖೆಯು ಯಾವುದೇ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳದೇ ಗೌತಮ್‌ನನ್ನು ಲೈಟ್‌ ಕಂಬದ ಮೇಲೆ ಹತ್ತಿಸಿದ್ದಾರೆ. ಅಷ್ಟೇ ಅಲ್ಲದೇ ಈ ವೇಳೆ ಎರಡರಲ್ಲಿ ಒಂದು ಲೈನ್‌ನ ಕರೆಂಟ್‌ ಅನ್ನು ಮಾತ್ರ ಆಫ್‌ ಮಾಡಿದ್ದಾರೆ. ಇದರಿಂದಾಗಿ ಗೌತಮ್‌ ಸಾವು ಬೆಸ್ಕಾಂನಿಂದ ನಡೆದಿರುವ ಕೊಲೆಯಾಗಿದೆ. ಇದಕ್ಕೆ ಎಇ, ಇಇನೇ ನೇರ ಕಾರಣ ಎಂದು ಮೃತ ಗೌತಮ್‌ ತಂದೆ ಆರೋಪಿಸಿದ್ದಾರೆ. ಇದನ್ನೂ ಓದಿ:  ಬಿಜೆಪಿ ಬಿ ಟೀಂ ಯಾರು ಅಂತ ಬಹಿರಂಗ ಚರ್ಚೆಗೆ ಸಿದ್ಧ- ಸುರ್ಜೇವಾಲಾಗೆ HDK ಸವಾಲ್

ಪ್ರಕರಣ ಸಂಬಂಧ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಿರ್ಲಕ್ಷತೆ ವಹಿಸಿ ಬೆಂಗಳೂರು, ಟ್ರಾನ್ಸ್‌ಫಾರ್ಮರ್‌, ಎಫ್‌ಐಆರ್‌, ಲೈನ್‌ಮ್ಯಾನ್‌ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಿದೆ. ಅಲ್ಲದೆ ಬೆಸ್ಕಾಂ ನಿಂದ ಕುಟುಂಬಕ್ಕೆ ಸೂಕ್ತ ಪರಿಹಾರ ಬರಬೇಕಿದೆ. ಇದನ್ನೂ ಓದಿ:  ಸೈನ್ಸ್ ಓದಲು ಇಷ್ಟವಿಲ್ಲದೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *