ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವ ರೀತಿ ಕಾಪಾಡಿಕೊಳ್ಳಬೇಕು- ಇಲ್ಲಿದೆ ಟಿಪ್ಸ್

Public TV
2 Min Read

ಬೆಂಗಳೂರು: ಚಳಿಗಾಲ ಈಗ ಶುರುವಾಗಿದ್ದು, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿಬೇಕು. ಬೆಂಗಳೂರಿನಲ್ಲಿ ಶೀತ ಗಾಳಿ ಹೆಚ್ಚಾಗಿದ್ದು ದಾಖಲೆಯ ಮಟ್ಟದಲ್ಲಿ ಚಳಿ ನಡುಗಿಸುತ್ತಿದೆ. ಚಳಿಗಾಲ ಶುರುವಾದಂತೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕೂಡ ಕಾಡುತ್ತವೆ.

ಚಳಿಗಾಲದಲ್ಲಿ ದೇಹದ ಉಷ್ಣತೆ ಕಡಿಮೆಯಾಗಿ ರಕ್ತದ ಚಲನೆಯ ವೇಗವೂ ಕಡಿಮೆಯಾಗುತ್ತದೆ. ವಾತಾವರಣ ವೈಪರೀತ್ಯದಿಂದಾಗಿ ದೇಹದಲ್ಲಿ ಬ್ಯಾಕ್ಟೀರಿಯಾ ವೈರಸ್ ಬೆಳವಣಿಗೆಯಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಚಳಿಗಾಲದಲ್ಲಿ ಸೋಂಕುಗಳು ಬೇಗ ಹರಡುತ್ತೆ. ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವೆಲ್ಲ ರೀತಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳಬೇಕು, ಏನ್ ಫುಡ್ ತಗೋಬೇಕು. ಹೆಲ್ತ್ ಟಿಪ್ಸ್ ಇಲ್ಲಿದೆ. ಇದನ್ನೂ ಓದಿ: ಚಳಿಗಾಲದಲ್ಲಿ ಮಗು ಆರೋಗ್ಯವಾಗಿರಲು ಹೀಗೆ ಮಾಡಿ

ಚಳಿಗಾಲದ ಕಾಯಿಲೆಗಳು- ಆರೋಗ್ಯ ಜೋಪಾನ!
* ಶೀತ, ಕೆಮ್ಮು, ಜ್ವರ ಸಾಮಾನ್ಯ.
* ಚಳಿಗಾಲದಲ್ಲಿ ಜ್ವರ ಬಹುತೇಕ ನ್ಯೂಮೋನಿಯಾವಾಗಿ ಬದಲಾಗುತ್ತೆ. ಜ್ವರ ಬಂದಾಗ ಜೋಪಾನವಾಗಿರಿ.
* ಶ್ವಾಸಕೋಶ ಸಂಬಂಧಿ ಕಾಯಿಲೆ ಹೆಚ್ಚಾಗುತ್ತೆ. ಉಸಿರಾಟದ ತೊಂದರೆ ಕಾಣಿಸುತ್ತೆ.
* ಅಸ್ತಮಾ ರೋಗಿಗಳಿಗೆ ಇನ್ನು ತೊಂದರೆ ಹೆಚ್ಚು ಆಗುತ್ತದೆ.
* ವಯಸ್ಸಾದವರಿಗೆ ಪಾದಗಳಲ್ಲಿ ನೋವು, ಮಂಡಿನೋವು ಚಳಿಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ.
* ಚರ್ಮಶುಷ್ಕವಾಗುತ್ತೆ ಹಾಗೂ ಚರ್ಮ ಸಂಬಂಧಿ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
* ಚಳಿಗಾಲದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚು ಎನ್ನಲಾಗಿದೆ. ಹೀಗಾಗಿ ಹೃದಯ ಸಂಬಂಧಿ ಕಾಯಿಲೆಯುಳ್ಳವರು ಎಚ್ಚರ ವಹಿಸುವುದು ಅತೀ ಮುಖ್ಯ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ಕಡಿಮೆ ಇರುವುದರಿಂದ ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೋಟಿನ್ ಪ್ರಮಾಣ ಹೆಚ್ಚಾಗಿ ರಕ್ತ ಹೆಪ್ಪುಗಟ್ಟಬಹುದು. ಇದರಿಂದ ರಕ್ತ ಸಂಚಾರಕ್ಕೆ ತೊಂದರೆಯಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ದೊರೆಯದೇ ಹೃದಯಾಘಾತವಾಗುವ ಸಾಧ್ಯತೆ ಅಧಿಕ.
* ಮಧುಮೇಹ ಇದ್ದವರಿಗೆ ಚಳಿಗಾಲದಲ್ಲಿ ಹೆಚ್ಚು ಆರೋಗ್ಯ ಸಮಸ್ಯೆ ಕಾಣಿಸುತ್ತೆ. ಇದನ್ನೂ ಓದಿ: ಚುಮು ಚುಮು ಚಳಿಗೆ ಡ್ರೈ ಸ್ಕಿನ್ ಸಮಸ್ಯೆನಾ? – ಚಳಿಗಾಲದಲ್ಲಿ ಚರ್ಮದ ಆರೈಕೆ ಹೀಗಿರಲಿ

ಚಳಿಗಾಲದ ಹೆಲ್ತ್ ಟಿಪ್ಸ್:
* ಸಾಧ್ಯವಾದಷ್ಟು ಬೆಚ್ಚಗಿರುವ ಬಟ್ಟೆಗಳನ್ನು ಬಳಸಿ.
* ಜ್ವರ, ಶೀತ, ನೆಗಡಿ, ಕೆಮ್ಮು ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದೇ ವೈದ್ಯರನ್ನು ಭೇಟಿಯಾಗಿ
* ಸೀಸನಲ್ ಫ್ರೂಟ್ಸ್ ತಿನ್ನಿ ಹೆಚ್ಚಾಗಿ ದಾಳಿಂಬೆ, ಕಿತ್ತಳೆ ಸೇವಿಸಿ. ಇದ್ರಿಂದ ರಕ್ತಕಣ ಹೆಚ್ವಾಗುತ್ತೆ
* ಸಾಧ್ಯವಾಷ್ಟು ಬಿಸಿ ಬಿಸಿ ಇರುವ ಊಟ, ತಿಂಡಿಯನ್ನು ಮಾಡಿ. ಬಿಸಿ ಪಾನೀಯ, ಕಾಫಿ, ರಾಗಿ ಗಂಜಿ ತರಕಾರಿ ಸೂಪ್ ಕುಡಿಯಿರಿ.
* ಚರ್ಮದ ಸಮಸ್ಯೆ ಹೆಚ್ಚಾಗಿ ಕಾಣಿಸೋದ್ರಿಂದ ಕೊಬ್ಬರಿ ಎಣ್ಣೆಯನ್ನು ಮೈ ಕೈಗೆ ಹಚ್ಚಿಕೊಳ್ಳಿ. ವೀಕೆಂಡ್ ನಲ್ಲಿ ಎಣ್ಣೆಸ್ನಾನ ಬೆಸ್ಟ್.
* ಶುಂಠಿ, ಬೆಳ್ಳುಳ್ಳಿ, ಚಕ್ಕೆ ಲವಂಗ ಕರಿಮೆಣಸಿನ ಬಳಕೆ ಆಹಾರ ಪದಾರ್ಥದಲ್ಲಿ ಹೆಚ್ಚಿರಲಿ.
* ಬಿಸಿ ನೀರನ್ನು ಸೇವಿಸಿ. ಎಣ್ಣೆ ಹೆಚ್ಚಾಗಿ ಹಾಕಿದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ. ಕರಿದ ತಿಂಡಿಗಳನ್ನು ಸೇವಿಸಬೇಡಿ.

ಮಕ್ಕಳು ವೃದ್ಧರು ಹುಷಾರು: ಮಕ್ಕಳಿಗೆ ಹಾಗೂ ವೃದ್ಧರಿಗೆ ಚಳಿಗಾಲ ಬಂದರೆ ಆಹಾರ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತೆ. ಮಕ್ಕಳಿಗೆ ಬೆಚ್ಚಗಿನ ಬಟ್ಟೆ, ಕುಲಾವಿ ಹಾಕಿ. ವಯಸ್ಸಾದವರೂ ಕೂಡ ಆರೋಗ್ಯದ ಕಾಳಜಿ ಚಳಿಗಾಲದಲ್ಲಿ ಹೆಚ್ಚಾಗಿ ಮಾಡಬೇಕು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *