ಬಹಿರಂಗ ಹೇಳಿಕೆ ನೀಡುವ ಶಾಸಕರೇ ಹುಷಾರ್! ಕಾಂಗ್ರೆಸ್ ಹೈಕಮಾಂಡ್ ವಾರ್ನಿಂಗ್ ಕಾಲ್?

Public TV
1 Min Read

ಬೆಂಗಳೂರು: ಬಹಿರಂಗ ಹೇಳಿಕೆ ನೀಡುವ ಕಾಂಗ್ರೆಸ್ (Congress) ಶಾಸಕರೇ ಹುಷಾರ್. ಕೈ ಕಟ್ಟಿ ಬಾಯಿ ಮುಚ್ಚಿ. ಇದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ. ಹೈಕಮಾಂಡ್ ಆದೇಶದ ಬೆನ್ನಲ್ಲೇ ಕೆಲ ಶಾಸಕರು ಸೈಲೆಂಟ್ ಆಗಿದ್ದು, ಸಿಎಂ, ಡಿಸಿಎಂ ಅಲರ್ಟ್ ಆಗಿದ್ದಾರೆ.

ಭ್ರಷ್ಟಾಚಾರ ಆರೋಪ, ಕಮಿಷನ್ ಕಿತ್ತಾಟ, ಸಚಿವರ ಅಸಹಕಾರದ ಬಗ್ಗೆ ಕಾಂಗ್ರೆಸ್ ಶಾಸಕರ ಅಸಹನೆ ಜೋರಾಗಿತ್ತು. ಇದು ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿತ್ತು. ಹಾಗಾಗಿ ಮಂಗಳವಾರ ಡೆಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಅವರು ಸಿಎಂ ಮೂಲಕ ವಾರ್ನಿಂಗ್ ಕಾಲ್ ರವಾನಿಸಿದ್ದಾರೆ. ಇವತ್ತು ವೇಣುಗೋಪಾಲ್ ಭೇಟಿ ವೇಳೆಯಲ್ಲೂ ಸಿಎಂಗೆ ಸಂದೇಶ ರವಾನೆಯಾಗಿದೆ ಎನ್ನಲಾಗಿದೆ. ಇದನ್ನೂ ಓದಿ: PUBLiC TV Impact | ಅಳಿವಿನಂಚಿನಲ್ಲಿದ್ದ ಸರ್ಕಾರಿ ಶಾಲೆಗೆ `ಪಬ್ಲಿಕ್’ ಪ್ರೋತ್ಸಾಹ – ಸರ್ಕಾರಿ ಶಾಲೆಗೆ ಹೆಚ್ಚಾಯ್ತು ಡಿಮ್ಯಾಂಡ್

ಇದು ಒಳ್ಳೆ ಬೆಳವಣಿಗೆಯಲ್ಲ. ಇದು ಪಕ್ಷದ ಇಮೇಜ್‌ಗೆ ಡ್ಯಾಮೇಜ್, ಸರ್ಕಾರಕ್ಕೂ ಕೆಟ್ಟ ಹೆಸರು. ಮೊದಲು ಬಾಯಿ ಬಂದ್ ಮಾಡಿ ಎಂದು ಕಟ್ಟಾಜ್ಞೆ ಹೊರಡಿಸಿದ್ದಾರೆ. ಈ ನಡುವೆ ಇವತ್ತು ಬಿ.ಆರ್.ಪಾಟೀಲ್ ಕರೆದು ಸಿಎಂ ಎಚ್ಚರಿಕೆ ಕೊಡುವ ಸಾಧ್ಯತೆ ಇದ್ದು, ಜಮೀರ್ ಉಪಸ್ಥಿತಿಯಲ್ಲಿ ಸಮಸ್ಯೆ ಬಗೆಹರಿಸಲು ಪ್ಲ್ಯಾನ್ ಮಾಡಿದ್ದಾರೆ. ಅಲ್ಲದೇ ಜುಲೈ ಮೊದಲ ವಾರದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲು ಚಿಂತಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಇಸ್ರೇಲ್ ಪರ ಬೇಹುಗಾರಿಕೆ – ಮೂವರನ್ನು ಗಲ್ಲಿಗೇರಿಸಿದ ಇರಾನ್

Share This Article