ಭಾರತ್ ಬಂದ್- ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನ

Public TV
1 Min Read

ಹಾವೇರಿ: ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆ ಭಾರತ್ ಬಂದ್ ಕರೆ ನೀಡಿದೆ. ಹಾವೇರಿಯಲ್ಲಿ ಭಾರತ ಬಂದ್ ಬೆಂಬಲಿಸಿ ಪ್ರತಿಭಟನೆಗೆ ಬಂದಿದ್ದ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ರೈತರನ್ನು ನೂರ್ ಅಹಮ್ಮದ್ ಮುಲ್ಲಾ ಮತ್ತು ರಾಕೇಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಹಗ್ಗ ಹಿಡಿದುಕೊಂಡು ಪ್ರತಿಭಟನೆಗೆ ಈ ಇಬ್ಬರು ರೈತರು ಬಂದಿದ್ದರು. ಟವೆಲ್‍ನಲ್ಲಿ ಹಗ್ಗವನ್ನು ಮುಚ್ಚಿಟ್ಟುಕೊಂಡು ಬಂದ ರೈತರ ಬಳಿಯಿದ್ದ ಹಗ್ಗವನ್ನು ಗಮನಿಸಿ ಹಗ್ಗವನ್ನು ಕಿತ್ತುಕೊಳ್ಳಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇದನ್ನೂ ಓದಿ: 10 ವರ್ಷ ಕಾಲ ರೈತರು ಪ್ರತಿಭಟನೆಗೆ ಸಿದ್ದರಿದ್ದಾರೆ – ರಾಕೇಶ್ ಟಿಕಾಯತ್

ದೇಶದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ಬಂದಿದ್ದೇವೆ ಎಂದು ಹಗ್ಗ ಕೊಡಲು ರೈತರು ನಿರಾಕರಿಸಿದರು. ಕೊನೆಗೂ ಹಗ್ಗವನ್ನು ಕಸಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಪೊಲೀಸರು ತಪ್ಪಿಸಿದರು. ನಂತರ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಡಿಸಿಪಿ ಮೇಲೆ ಕಾರು ಹತ್ತಿಸಲು ಯತ್ನ

Share This Article
Leave a Comment

Leave a Reply

Your email address will not be published. Required fields are marked *