ಭಾರತ್ ಬಂದ್ – ಖಡಕ್ ಸೂಚನೆ ನೀಡಿದ ಡಿಜಿಪಿ ನೀಲಮಣಿ ರಾಜು

Public TV
1 Min Read

ಬೆಂಗಳೂರು: ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಡಿಜಿಪಿ ನೀಲಮಣಿ ರಾಜು ಅವರು ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸರಿಗೆ ಖಡಕ್ ಸೂಚನೆಯನ್ನು ಕೊಟ್ಟಿದ್ದಾರೆ.

ಕಾರ್ಮಿಕ ಸಂಘಟನೆಗಳು 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎರಡು ದಿನ ಭಾರತ್ ಬಂದ್ ಮಾಡಿದ್ದಾರೆ. ಆದ್ದರಿಂದ ಎರಡು ದಿನ ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಗೆ ಡಿಜಿಪಿ ನೀಲಮಣಿ ರಾಜು ಅವರು ಸೂಚನೆ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳು ಮತ್ತು ಪಟ್ಟಣಗಳಲ್ಲಿ ಹೆಚ್ಚಿನ ಬಂದೋಬಸ್ತ್ ಒದಗಿಸಲಾಗಿದೆ. ರಾಜ್ಯಾದ್ಯಂತ ಬಂದೋಬಸ್ತ್ ಗಾಗಿ ಬರೋಬ್ಬರಿ 54 ಸಾವಿರ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.

ಜಿಲ್ಲೆಗಳಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಬಲವಂತವಾಗಿ ಬಂದ್ ಮಾಡುವುದು, ತೊಂದರೆ ಕೊಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆಯನ್ನು ಕೊಟ್ಟಿದ್ದಾರೆ. ಒಟ್ಟಿನಲ್ಲಿ ಈ ಬಂದ್ ನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೇಚ್ಛರಿಕೆಗೆ ವಹಿಸುವಂತೆ ಎಲ್ಲ ಜಿಲ್ಲೆಗಳ ಎಸ್‍ಪಿ, ಐಜಿಪಿಗಳು ಮತ್ತು ಕಮೀಷನರೇಟ್ ಗಳಿಗೆ ಸೂಚನೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *