ಪಾದಯಾತ್ರೆಯನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಮಾಡೋಕ್ಕಾಗಲ್ಲ: ನಿಯಮ ಉಲ್ಲಂಘನೆ ಆರೋಪಕ್ಕೆ ರಾಗಾ ತಿರುಗೇಟು

Public TV
2 Min Read

ನವದೆಹಲಿ: ಕಾಂಗ್ರೆಸ್ (Congress) ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭದ್ರತೆಯ ವಿವಾದದ ಉಂಟಾಗಿತ್ತು. ಇದಕ್ಕೆ ಪಕ್ಷ ದೆಹಲಿ ಪೊಲೀಸರನ್ನು ದೂಷಿಸಿತ್ತು. ಬಳಿಕ ಕೇಂದ್ರ ಮೀಸಲು ಪೊಲೀಸ್ ಪಡೆ ರಾಹುಲ್ ಗಾಂಧಿ ಅವರು ಸ್ವತಃ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಹೊರಿಸಿದ್ದು, ಇದೀಗ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಗಾ ನಾವು ಭಾರತ್ ಜೋಡೋ ಯಾತ್ರೆಯನ್ನು ಬುಲೆಟ್ ಪ್ರೂಫ್ ವಾಹನದಲ್ಲಿ (Bullet Proof Car) ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ 113 ಬಾರಿ ಭದ್ರತಾ ನಿಯಮ ಉಲ್ಲಂಘನೆ ಮಾಡಿರುವುದಾಗಿ ಕೇಂದ್ರದ ಅರೆಸೇನಾ ಪಡೆ ಸಿಆರ್‌ಪಿಎಫ್ ಹೇಳಿದೆ. ಇದಕ್ಕೆ ರಾಹುಲ್ ತಿರುಗೇಟು ನೀಡಿ, ಬುಲೆಟ್ ಪ್ರೂಫ್ ಕಾರಿನಲ್ಲಿ ನಾನು ಭಾರತ್ ಜೋಡೋ ಯಾತ್ರೆಯನ್ನು ಮಾಡಬೇಕೆಂದು ಸರ್ಕಾರ ಬಯಸುತ್ತದೆ. ಭಾರತ್ ಜೋಡೋ ಯಾತ್ರೆ ಪಾದಯಾತ್ರೆಯಾಗಿದ್ದು, ಅದನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಮಾಡಲು ಹೇಗೆ ಸಾಧ್ಯ ಎಂದು ಕೇಳಿದ್ದಾರೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಪೊಲೀಸರು ರಾಹುಲ್ ಗಾಂಧಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದಿದ್ದರು. ಆದರೆ ಈ ಬಗ್ಗೆ ರಾಷ್ಟ್ರರಾಜಧಾನಿಯಲ್ಲಿ ಭದ್ರತಾ ವೈಫಲ್ಯವಾಗಿರುವ ಆರೋಪವನ್ನು ಭದ್ರತಾ ಪಡೆಯು ನಿರಾಕರಿಸಿದೆ.

ರಾಹುಲ್ ಗಾಂಧಿ ಅವರಿಗೆ `ಝಡ್ ಪ್ಲಸ್’ ಭದ್ರತೆ ನೀಡಲಾಗಿದ್ದು, ಭಾರತ್ ಜೋಡೋ ಯಾತ್ರೆಯು ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಿಗೆ ಪ್ರವೇಶಿಸಿದಾಗ ಅಗತ್ಯ ಭದ್ರತೆ ಖಚಿತಪಡಿಸುವಂತೆ ಕಾಂಗ್ರೆಸ್ ಕೋರಿದೆ. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್ ನನ್ನ ಗುರು – ರಾಹುಲ್ ಗಾಂಧಿ

ರಾಜ್ಯದ ಪೊಲೀಸರು ಹಾಗೂ ಇತರೆ ಭದ್ರತಾ ಇಲಾಖೆಗಳ ಸಮನ್ವಯದೊಂದಿಗೆ ಸಿಆರ್‌ಪಿಎಫ್ ರಾಹುಲ್ ಗಾಂಧಿ ಅವರಿಗೆ ಅಗತ್ಯ ಭದ್ರತೆಯನ್ನು ಒಗಿಸಿತ್ತು. ಡಿಸೆಂಬರ್ 24ರ ಕಾರ್ಯಕ್ರಮಕ್ಕಾಗಿ 2 ದಿನ ಮುಂಚಿತವಾಗಿಯೇ ಭದ್ರತಾ ಸಂಪರ್ಕ ಸುಧಾರಣೆ (ಎಎಸ್‌ಎಲ್) ನಡೆಸಲಾಗಿತ್ತು ಎಂದು ಸಿಆರ್‌ಪಿಎಫ್ ಹೇಳಿದೆ. ಪ್ರಮುಖ ಕಾರ್ಯಕ್ರಮಗಳಲ್ಲಿ ವಿಐಪಿಗಳ ಭದ್ರತೆಗಾಗಿ ಭದ್ರತಾ ಪಡೆಗಳು ಯೋಜನೆ ರೂಪಿಸಲು ನಡೆಸುವ ಸಭೆಯನ್ನು ಎಎಸ್‌ಎಲ್ ಎನ್ನಲಾಗುತ್ತದೆ.

ದೆಹಲಿಯಲ್ಲಿ ಯಾತ್ರೆಯ ದಿನ ಭದ್ರತೆಗೆ ಸಂಬಂಧಿಸಿದ ಎಲ್ಲಾ ಮಾರ್ಗಸೂಚಿಗಳನ್ನು ಪೂರ್ಣವಾಗಿ ಅನುಸರಿಸಲಾಗಿದೆ. ಈ ಬಗ್ಗೆ ದೆಹಲಿ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಆದರೆ ರಾಹುಲ್ ಗಾಂಧಿ ಅವರು ಪದೇ ಪದೇ ಭದ್ರತಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ. ಸುರಕ್ಷತೆಗಾಗಿ ಭದ್ರತೆ ನಿಯೋಜಿಸಿದ್ದರೆ, ರಕ್ಷಣೆಗೆ ಒಳಪಟ್ಟಿರುವ ವ್ಯಕ್ತಿಯೇ ಭದ್ರತಾ ನಿಯಮ ಮುರಿಯುವಂತೆ ಮಾಡಿದ್ದಾರೆ. ಅವರಿಗೂ ಇದನ್ನು ಆಗಾಗ್ಗೆ ತಿಳಿಸಲಾಗಿದೆ ಎಂದು ಹೇಳಿದೆ. ಇದನ್ನೂ ಓದಿ: 73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *