ಭಾರತಿ ವಿಷ್ಣುವರ್ಧನ್‍ರಿಂದ ಸಂತ್ರಸ್ತರಿಗೆ ಸ್ವೆಟರ್, ಬಟ್ಟೆ ವಿತರಣೆ

Public TV
1 Min Read

ಮೈಸೂರು: ನೆರೆ ಪೀಡಿತ ಪ್ರದೇಶಗಳಿಗೆ ಕೆಲ ಸ್ಯಾಂಡಲ್‍ವುಡ್ ನಟರು ಹೋಗಿ ಸಂತ್ರಸ್ತರ ಕಷ್ಟಗಳನ್ನು ಆಲಿಸಿದ್ದಾರೆ. ಅವರ ಅಭಿಮಾನಿಗಳು ತಮ್ಮ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಿದ್ದಾರೆ. ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಸಂತ್ರಸ್ತರ ಕೇಂದ್ರಕ್ಕೆ ಹೋಗಿ ಸಾಂತ್ವನ ಹೇಳಿದ್ದಾರೆ.

ಜಿಲ್ಲೆಯಲ್ಲಿ ಕಪಿಲಾ ಪ್ರವಾಹದಿಂದ ಮನೆ ಕಳೆದುಕೊಂಡು ಸಂತ್ರಸ್ತರು ನಂಜನಗೂಡಿನಲ್ಲಿನ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ಇಂದು ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅವರ ಅಳಿಯ ನಟ ಅನಿರುದ್ಧ ಕೇಂದ್ರಕ್ಕೆ ತೆರಳಿ ಅಲ್ಲಿ ಆಶ್ರಯ ಪಡೆದಿರುವ ಮಹಿಳೆಯರು ಹಾಗೂ ಮಕ್ಕಳ ಜೊತೆ ಕುಳಿತು ಮಾತುಕತೆ ನಡೆಸಿದರು. ಅಷ್ಟೇ ಅಲ್ಲದೆ ಭಾರತೀ ವಿಷ್ಣುವರ್ಧನ್ ಸಂತ್ರಸ್ತರಿಗೆ ಸ್ವೆಟರ್, ಬಟ್ಟೆ, ಬಿಸ್ಕೆಟ್ ಮತ್ತು ಕೆಲ ಅಗತ್ಯ ವಸ್ತುಗಳನ್ನ ನೀಡಿದ್ದಾರೆ.

ಇತ್ತೀಚೆಗೆ ಗದಗ ಜಿಲ್ಲೆಯ ಹೊಳೆ ಹೊನ್ನೂರು ಗ್ರಾಮಕ್ಕೆ ಸತೀಶ್ ಮತ್ತು ಅವರ ತಂಡ ಭೇಟಿ ನೀಡಿತ್ತು. ಗ್ರಾಮದ ಪ್ರತಿ ಮನೆಗಳಿಗೂ ತೆರಳಿದ್ದ ಸತೀಶ್ ಎಲ್ಲರ ನೋವನ್ನು ಆಲಿಸಿ, ಪ್ರವಾಹ ಪರಿಣಾಮವನ್ನು ಅರಿತರು. ಹಾಗೆಯೇ ಕೆಲ ದಿನಬಳಕೆ ವಸ್ತುಗಳನ್ನು ನೀಡಿ ನಿರಾಶ್ರಿತರಿಗೆ ಸಹಾಯ ಮಾಡಿದ್ದರು. ಪ್ರತಿ ಮನೆಗೆ ಭೇಟಿ ನೀಡಿದ ಸತೀಶ್ ತಾವು ಅದೇ ಗ್ರಾಮದ ನಿವಾಸಿ ಎಂಬಂತೆ ಗ್ರಾಮಸ್ಥರೊಂದಿಗೆ ಬೆರೆತಿದ್ದರು.

Share This Article
Leave a Comment

Leave a Reply

Your email address will not be published. Required fields are marked *