ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳ ಜಾಮೀನಿಗೆ ಸುಪ್ರೀಂ ನಕಾರ

Public TV
1 Min Read

ನವದೆಹಲಿ: ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ತನಿಖೆ ಪೂರ್ಣಗೊಳ್ಳುವ ತನಕ ಜಾಮೀನು ನೀಡಲು ಸಾಧ್ಯವಿಲ್ಲ. ಆರು ತಿಂಗಳೊಳಗೆ ತನಿಖೆ ಪುರ್ಣಗೊಳ್ಳದಿದ್ರೆ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ನ್ಯಾ. ಎಸ್.ಎ. ಬೊಬ್ಡೆ, ನ್ಯಾ ನಾಗೇಶ್ವರ ರಾವ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡುವ ಕುರಿತು ಆರೋಪಿ ರಾಜೇಶ್ವರಿ, ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಕೋಟ ಇವರ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಆರೋಪಿಗಳು ಸುಪ್ರೀಂ ಕೋರ್ಟ್ ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.

ಏನಿದು ಪ್ರಕರಣ?: ದುಬೈನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ(52) ಕಳೆದ ವರ್ಷ ಜುಲೈ 28ರಿಂದ ಕಾಣೆಯಾಗಿದ್ದರು. ಈ ಕುರಿತು ಜುಲೈ 29ರಂದು ಭಾಸ್ಕರ್ ಶೆಟ್ಟಿ ತಾಯಿ ಮಣಿಪಾಲ ಪೊಲಿಸರಿಗೆ ದೂರು ನೀಡಿದ್ದರು. ಆದ್ರೆ ಪತಿ ನಾಪತ್ತೆಯಾಗರೋ ಕುರಿತು ಪತ್ನಿ ರಾಜೇಶ್ವರಿ ಹಾಗೂ ಪುತ್ರ ನವನೀತ್ ಶೆಟ್ಟಿ ಯಾವುದೇ ದೂರು ನೀಡದಿರುವುದರಿಂದ ಅನುಮಾನಗೊಂಡ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಪತ್ನಿ ಮಗ ಹಾಗೂ ಮಗನ ಸ್ನೇಹಿತ ನಿರಂಜನ್ ಕೊಲೆ ಮಾಡಿರುವ ಬಗ್ಗೆ ಬೆಳಕಿಗೆ ಬಂದಿತ್ತು.

ಭಾಸ್ಕರ್ ಶೆಟ್ಟಿ ಅವರನ್ನು ಕೊಲೆಗೈದು ನಂದಳಿಕೆ ಎಂಬಲ್ಲಿ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು.

https://www.youtube.com/watch?v=K8JuJykqi_A

https://www.youtube.com/watch?v=3WMLludJRRU

https://www.youtube.com/watch?v=VUjoxc2emNs

https://www.youtube.com/watch?v=kWyQttGrIRc

https://www.youtube.com/watch?v=2IlEl29Jy7E

https://www.youtube.com/watch?v=BIdqA1X-RUQ

 

Share This Article
Leave a Comment

Leave a Reply

Your email address will not be published. Required fields are marked *