ಭೀಮಾತೀರದ ನಕಲಿ ಎನ್‌ಕೌಂಟರ್ ಕೇಸ್ – ಜು.1ಕ್ಕೆ ವಿಚಾರಣೆ ಮುಂದೂಡಿಕೆ

Public TV
1 Min Read

ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕರಾದ ಧರ್ಮರಾಜ್ ಚಡಚಣ ಹಾಗೂ ಆತನ ಸಹೋದರ ಗಂಗಾಧರನ ನಕಲಿ ಎನ್‌ಕೌಂಟರ್ ಪ್ರಕರಣದ ವಿಚಾರಣೆಯನ್ನು ವಿಜಯಪುರ (Vijayapura) ಜಿಲ್ಲಾ ನ್ಯಾಯಾಲಯ ಜು.1ಕ್ಕೆ ಮುಂದೂಡಿದೆ.

ಸೋಮವಾರ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಆರೋಪಿಗಳಾದ ಮಹಾದೇವ ಭೈರಗೊಂಡ ಹಾಗೂ ಇತರೆ 16 ಜನರು ಹಾಜರಿದ್ದರು.ಇದನ್ನೂ ಓದಿ: 2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

ಹಂತಕ ಧರ್ಮರಾಜ್ ನಕಲಿ ಎನ್‌ಕೌಂಟರ್ ನಡೆಸಿದ್ದು, ಆಗಿನ ಚಡಚಣ ಪಿಎಸ್‌ಐ ಆಗಿ ಇದೇ ಗೋಪಾಲ್ ಹಳ್ಳೂರ್ ಕಾರ್ಯನಿರ್ವಹಿಸುತ್ತಿದ್ದರು. ಈ ಇಬ್ಬರು ಭೀಮಾತೀರದ ಚಡಚಣ ಸಹೋದರರ ಹತ್ಯೆ ಪ್ರಕರಣದ ಮುಖ್ಯ ಆರೋಪಿಗಳಾಗಿದ್ದಾರೆ. ಈ ಇಬ್ಬರು ಸಹ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಜು.1ಕ್ಕೆ ಮುಂದೂಡಿದರು. ಭೀಮಾತೀರದ ನಟೋರಿಯಸ್‌ಗಳ ವಿಚಾರಣೆ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಬಿಗಿಭದ್ರತೆ ನಿಯೋಜನೆ ಮಾಡಲಾಗಿತ್ತು.ಇದನ್ನೂ ಓದಿ: ಅಲ್ಲು ಹೊಸ ಸಿನಿಮಾ ಡ್ಯೂನ್‌ ಕಾಪಿ? – ಕಿಡಿ ಕಿಡಿ ಕ್ಲಾರಿಟಿ ಕೊಟ್ಟ ಅಟ್ಲೀ

Share This Article