ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

By
1 Min Read

ಭೋಪಾಲ್: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ‌ (Vande Bharat Train) ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ಮುಂಜಾನೆ ಮಧ್ಯಪ್ರದೇಶದ (Madhya Pradesh) ಕುರ್ವೈ ಕೆಥೋರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ರೈಲು ಭೋಪಾಲ್‍ನಿಂದ ದೆಹಲಿಗೆ (Delhi) ತೆರಳುತ್ತಿತ್ತು. ಈ ವೇಳೆ ರೈಲಿನ ಕೋಚ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿದೆ. ಬಳಿಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ ಎನ್ನಲಾಗಿದೆ. ಘಟನೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಲವು ಪ್ರಯಾಣಿಕರು ಸಹ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆಗೆ ಸಿಲುಕಿಕೊಂಡ 75,000ಕ್ಕೂ ಹೆಚ್ಚು ಲೋಡೆಡ್ ಟ್ರಕ್‌ಗಳು

ಈ ಬಗ್ಗೆ ಸ್ಪಷ್ಟನೆ ನೀಡಿರುವ ರೈಲ್ವೇ ಅಧಿಕಾರಿಗಳು ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಅಲ್ಲದೇ ಇಂತಹ ಪ್ರಕರಣ ಮರುಕಳಿಸದಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್‍ನಲ್ಲಿ ಮಧ್ಯಪ್ರದೇಶದ ರಾಣಿ ಕಮಲಪತಿ ರೈಲು ನಿಲ್ದಾಣದಿಂದ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣದ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಉದ್ಘಾಟಿಸಿದ್ದರು. ಇದನ್ನೂ ಓದಿ: ಕ್ಯಾಸಿನೋಗಾಗಿ ಕಳ್ಳತನ – ಮೂವರು ಆರೋಪಿಗಳು ಅರೆಸ್ಟ್

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್